ಒಮಿಕ್ರಾನ್ ಭೀತಿ ;ಒಂದೇ ದಿನ 14 ಮಂದಿಗೆ ಸೋಂಕು ಧೃಡ!

Webdunia
ಭಾನುವಾರ, 26 ಡಿಸೆಂಬರ್ 2021 (11:25 IST)
ಉಡುಪಿ : ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಮಣಿಪಾಲದಲ್ಲಿ ಒಂದೇ ವಾರದಲ್ಲಿ 18 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಅದರಲ್ಲೂ ನಿನ್ನೆ (ಡಿಸೆಂಬರ್ 25) ಶನಿವಾರ 14 ಜನರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲೇ ಅಧಿಕ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಣಿಪಾಲದ 09 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

 
ಪಾಸಿಟಿವ್ ಬಂದ ವಿದ್ಯಾರ್ಥಿಗಳೆಲ್ಲ ಹೊರ ರಾಜ್ಯದವರು. ಪಾಸಿಟಿವ್ ಬಂದ 14  ಮಂದಿಯ ವರದಿಯನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಓಮಿಕ್ರಾನ್ ಶಂಕೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಗಂಟಲ ದ್ರವವನ್ನು ಕೂಡ ಬೆಂಗಳೂರಿಗೆ ಕಳುಹಿಸಿದೆ. ವಾರದ ಹಿಂದೆಯಷ್ಟೇ ವೃದ್ದ ದಂಪತಿಗಳಲ್ಲಿ ಓಮಿಕ್ರಾನ್ ಪತ್ತೆಯಾಗಿತ್ತು.

 
ಇದೀಗ ಒಂದೇ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಎಚ್ಚರಿಕೆ ವಹಿಸಿರುವ ಜಿಲ್ಲಾಡಳಿತ ಮಣಿಪಾಲ ಎಂಐಟಿ ಪರಿಸರವನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಆಗಿ ಮಾಡಿದೆ ಎಂದು ಉಡುಪಿಯ ಡಿಎಚ್ಒ ಡಾ. ನಾಗಭೂಷಣ ಉಡುಪ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಮುಂದಿನ ಸುದ್ದಿ
Show comments