ಡಿಕೆಶಿ ವಿರುದ್ಧ 15% ಕಮಿಷನ್ ಆರೋಪ ಸುಳ್ಳು : ರಾಮಲಿಂಗಾ ರೆಡ್ಡಿ

Webdunia
ಗುರುವಾರ, 10 ಆಗಸ್ಟ್ 2023 (12:54 IST)
ಬೆಂಗಳೂರು : ಬಿಜೆಪಿ ಮೇಲೆ ಗುತ್ತಿಗೆದಾರರು ಮಾಡಿದ 40% ಆರೋಪ ಸತ್ಯ. ಕಾಂಗ್ರೆಸ್ ಮೇಲೆ ಮಾಡುತ್ತಿರುವ 15% ಕಮೀಷನ್ ಆರೋಪ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಡಿಸಿಎಂ ವಿರುದ್ಧದ ಕಮಿಷನ್ ಆರೋಪದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ತನಿಖೆ ಮಾಡಲು 4 ತಂಡಗಳನ್ನು ರಚನೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಮೇಲೆ ಬಿಲ್ ಕ್ಲಿಯರ್ ಆಗುತ್ತೆ. ಇನ್ನೂ ಸಮಿತಿ ವರದಿಯನ್ನು ಕೊಟ್ಟಿಲ್ಲ. ಆಗಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. 

ಬಿಲ್ ಬೇಗ ಬಿಡುಗಡೆ ಮಾಡಬೇಕು ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಬಿಜೆಪಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಕೆಲಸವೇ ಆಗಿಲ್ಲ, ಬಿಲ್ ಎಲ್ಲಿ ಕೋಡೋಣ. ಇದರ ತನಿಖೆಗೆ ತಂಡ ರಚನೆ ಮಾಡಿದ್ದೇವೆ. ತನಿಖೆಯ ವರದಿ ಬರಲಿ ಎಂದರು.

ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಪಡೆದಿದ್ದರು. ನಮ್ಮ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಇವರು ಕಳೆದುಕೊಂಡಿದ್ದಾರೆ. ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ಬಿಜೆಪಿ ಅವರಿಗೆ ವಿರೋಧ ಪಕ್ಷದಲ್ಲಿ ಇರಲು ಜನ ಆದೇಶ ಮಾಡಿದ್ದಾರೆ. ನಾಲ್ಕು ಮುಕ್ಕಾಲು ವರ್ಷ ಅವರು ವಿಪಕ್ಷದಲ್ಲೇ ಇರಲಿ ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments