Select Your Language

Notifications

webdunia
webdunia
webdunia
webdunia

5.75 ಕೋಟಿ ಹಳೆಯ ನೋಟು ವಶ: ಬೆಂಗಳೂರಿನಲ್ಲಿ 15 ಆರೋಪಿಗಳ ಬಂಧನ

5.75 ಕೋಟಿ ಹಳೆಯ ನೋಟು ವಶ: ಬೆಂಗಳೂರಿನಲ್ಲಿ 15 ಆರೋಪಿಗಳ ಬಂಧನ
ಬೆಂಗಳೂರು , ಮಂಗಳವಾರ, 6 ಜೂನ್ 2017 (19:11 IST)
5.75 ಕೋಟಿ ಹಳೆಯ ನೋಟುಗಳನ್ನು ಬದಲಾಯಿಸಲು ಯತ್ನಿಸುತ್ತಿರುವ ಸಂದರ್ಭದಲ್ಲಿ 15 ಆರೋಪಿಗಳನ್ನು  ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಇದು ಒಂದು ತುದಿಯಲ್ಲಿ ಬಸವನಗುಡಿಯಲ್ಲಿರುವ ಹೋಟೆಲ್ನ ಮುಂದೆ ನಿಲುಗಡೆಯಾದ ಕಾರಿನ ಹುಡುಕಾಟವನ್ನು ಅನುಸರಿಸಿತು, ಉಪ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
 
ಹಳೆಯ ನೋಟುಗಳನ್ನು ಬದಲಾಯಿಸಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಪೊಲೀಸ್ ಉಪ ಆಯುಕ್ತ ಎಸ್.ಡಿ.ಶರಣಪ್ಪ ಬಸವನಗುಡಿ ಪ್ರದೇಶದಲ್ಲಿರುವ ಹೋಟೆಲ್‌ನ ಪಾರ್ಕಿಂಗ್‌ನಲ್ಲಿ ನಿಂತಿದ್ದ ಕಾರನ್ನು ತಪಾಸಣೆ ನಡೆಸಿದಾಗಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. 
 
2.15 ಕೋಟಿ ರೂ. ಮೌಲ್ಯದ ಕರೆನ್ಸಿ ವಿನಿಮಯ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ
 
ಬೆಂಗಳೂರು ಮೂಲದ ಆರೋಪಿಗಳಾದ 40 ವರ್ಷ ವಯಸ್ಸಿನ ಇಕ್ಬಾಲ್ ಮೊಹಮ್ಮದ್, 30 ವರ್ಷ ವಯಸ್ಸಿನ ಎಸ್. ರಾಜೇಶ್,  ಮತ್ತು ರವೀಂದ್ರನಾಥ್‌ನನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಂದು ಕಾರು, ದ್ವಿಚಕ್ರವಾಹನ ಮತ್ತು ಎರಡು ಮೊಬೈಲ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ನಂತರ ಪಿಇಎಸ್‌ ಕಾಲೇಜು ಬಳಿ 1.12 ಕೋಟಿ ರೂಪಾಯಿಗಳ ಮೊತ್ತದ ಹಳೆಯ ನೋಟುಗಳನ್ನು ಬದಲಾಯಿಸಲು ಯತ್ನಿಸುತ್ತಿರುವಾಗ ಆರೋಪಿಗಳಾದ ಪಿ.ಸದಾಶಿವ, ಇ.ಹರ್ಷಾ ಅವರನ್ನು ಬಂಧಿಸಲಾಗಿದ್ದು ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
 
ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ 50 ಲಕ್ಷ ರೂಪಾಯಿಗಳ ಹಳೆಯ ನೋಟುಗಳನ್ನು ಬದಲಿಸುತ್ತಿರುವಾಗ ಇಬ್ಬರು ಆರೋಪಿಗಳನ್ನು ಬಂಧಿಸಿ ದ್ವಿಚಕ್ರ ವಾಹನ ಮತ್ತು ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
 
ಸುಬ್ರಮಣ್ಯಪುರ ಪ್ರದೇಶದಲ್ಲಿ ಚಿಕ್ಕಬಳ್ಳಾಪುರ ಮೂಲದ ನಾಲ್ವರು ವ್ಯಕ್ತಿಗಳು 98 ಲಕ್ಷ ರೂ. ಹಳೆಯ ನೋಟು ಬದಲಿಸುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ 1 ಕೋಟಿ ರೂ ಹಳೆಯ ನೋಟು ಬದಲಿಸುತ್ತಿರುವಾಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೃತ ರೈತರಿಗೆ ಸೂಕ್ತ ಪರಿಹಾರ: ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ