Webdunia - Bharat's app for daily news and videos

Install App

ಸೆಕ್ಸ್ ವಿಡಿಯೋದಿಂದ ಉದ್ರೇಕಗೊಂಡ 15 ವರ್ಷದ ಬಾಲಕ ಎಸಗಿದ ಕೃತ್ಯದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ

Webdunia
ಸೋಮವಾರ, 24 ಡಿಸೆಂಬರ್ 2018 (12:32 IST)
ಮುಂಬೈ : ತಂದೆಯ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ನೋಡಿ ಉದ್ರೇಕಗೊಂಡ 15 ವರ್ಷದ ಬಾಲಕನೊಬ್ಬ 10 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.


ಕೊಲೆಯಾದ ಬಾಲಕ ಹಾಗೂ ಆರೋಪಿ ಬಾಲಕ ನೆರೆಹೊರೆ ಮನೆಯವರಾಗಿದ್ದು, ನೀಲಿ ಚಿತ್ರ ನೋಡಿ ಪ್ರೇರಿತನಾದ 15 ವರ್ಷದ ಬಾಲಕ ಸಂಜೆ ಟ್ಯೂಷನ್‍ ನಿಂದ ಮರಳುತ್ತಿದ್ದ 10 ವರ್ಷದ ಬಾಲಕನನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಆಗ ಬಾಲಕ ಕಿರುಚಿಕೊಂಡಿದ್ದಕ್ಕೆ ಆತನ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಉಸಿರುಗಟ್ಟಿಸಿ ಬಾಲಕ ಮೃತಪಟ್ಟಿದ್ದಾನೆ.


ಆಗ ಬಾಲಕನ ಉಡುಪುಗಳನ್ನು ಬಿಚ್ಚಿ ಶವವನ್ನು ಮಾತ್ರ ಟ್ರಾಲಿ ಬ್ಯಾಗ್‍ನಲ್ಲಿ ಇಟ್ಟು ಬಳಿಕ ಬಟ್ಟೆ ಹಾಗೂ ಸ್ಕೂಲ್ ಬ್ಯಾಗ್ ಅನ್ನು ಸಾರ್ವಜನಿಕ ಶೌಚಾಲಯದಲ್ಲಿ ಬಚ್ಚಿಟ್ಟು ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದಾನೆ. ನಂತರ ಬಾಲಕನ ಮೃತದೇಹವನ್ನು ತನ್ನ ಸ್ನೇಹಿತನ ಸ್ಕೂಟರ್ ಮೇಲೆ ಸಪೇದ್ ಪುಲ್ ನಾಲಾವರೆಗೂ ತೆಗೆದುಕೊಂಡು ಹೋಗಿ ನಾಲೆಯಲ್ಲಿ ಮೃತದೇಹ ಎಸೆದು ಪರಾರಿಯಾಗಿದ್ದಾನೆ.


ಇತ್ತ ಪೋಷಕರು ಮಗ ಕಾಣದೆ ಹುಡುಕಾಟ ಶುರು ಮಾಡಿದ್ದರು.  ಪ್ರಕರಣಕ್ಕೆ ತಿರುವು ನೀಡಲು ಆರೋಪಿ ಬಾಲಕ ಗೆಳೆಯನೊಂದಿಗೆ ಸೇರಿ ಬಾಲಕನನ್ನು ಕಿಡ್ನ್ಯಾಪ್ ಮಾಡಿರುವುದಾಗಿ ಆತನ ಪೋಷಕರಿಗೆ ಫೋನ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾನೆ.  ನಂತರ ಕೊಲೆಯಾಗಿದ್ದ ಬಾಲಕನ ಮೃತ ದೇಹವು ಸಪೇದ್ ಪುಲ್ ನಾಲಾದಲ್ಲಿ ತೇಲುತ್ತಿದ್ದ ಟ್ರಾಲಿ ಬ್ಯಾಗ್‍ನಲ್ಲಿ ಶನಿವಾರ ಪತ್ತೆಯಾಗಿತ್ತು.


ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರೀಕ್ಷಿಸಿದಾಗ ಆರೋಪಿ ಬಾಲಕ ಸ್ಕೂಟರ್ ಮೇಲೆ ಟ್ರಾಲಿ ಬ್ಯಾಗ್ ಶವ ಸಾಗಿಸುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ