Webdunia - Bharat's app for daily news and videos

Install App

ಸುಮಾರು 12 ಕೋಟಿ ಮೌಲ್ಯದ 1500 ಕೆ‌ಜಿ ಗಾಂಜಾ ಜಪ್ತಿ..!

Webdunia
ಭಾನುವಾರ, 16 ಜುಲೈ 2023 (20:00 IST)
ಬೆಂಗಳೂರಿನಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಸಲ್ಮಾನ್, ಆತನಿಗೆ ಗಾಂಜಾ ಪೂರೈಸುತ್ತಿದ್ದ ರಾಜಸ್ಥಾನ ಮೂಲದ ಚಂದ್ರಭಾನ್ ಬಿಷ್ಣೋಯಿ ಹಾಗೂ ಆಂಧ್ರಪ್ರದೇಶ ಮೂಲದ ಲಕ್ಷ್ಮಿ ಮೋಹನ್ ದಾಸ್ ಇವರೇ ಪ್ರಮುಖ ಆರೋಪಿಗಳು. ಇದರಲ್ಲಿ ಪ್ರಮುಖ ಆರೋಪಿಯಾಗಿರುವ ಚಂದ್ರಭಾನ್ ಬಿಷ್ಣೋಯಿ ಎಂಬಿಎ ವ್ಯಾಸಾಂಗ ಮಾಡಿದ್ದಾನೆ. ಲಕ್ಷ್ಮಿ ಮೋಹನ್ ದಾಸ್ ಬಿ.ಎ ಪದವೀಧರ. ಆದರೆ ಇಬ್ಬರೂ ಸಹ ಅಂತರ್ ರಾಜ್ಯ ಗಾಂಜಾ ಮಾರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.. ಇತ್ತೀಚಿಗೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬ ಆರೋಪಿಯನ್ನ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದಾಗ ಅಂತರ್ ರಾಜ್ಯ ಮಾದಕ ಜಾಲ ಪತ್ತೆಯಾಗಿತ್ತು. ಬಳಿಕ ಆಂಧ್ರಪ್ರದೇಶದ ವಿಖಾಪಟ್ಟಣಂಗೆ ತೆರಳಿ ಮೂರು ವಾರಗಳ ಕಾಲ ಮಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಚಂದ್ರಭಾನ್ ಬಿಷ್ಣೋಯಿ ಹಾಗೂ ಲಕ್ಷ್ಮಿ ಮೋಹನ್ ದಾಸ್ ನನ್ನ ಬಂಧಿಸಿದ್ದಾರೆ.
 
ರಾಜಸ್ಥಾನ ನೊಂದಣಿಯ ಗೂಡ್ಸ್ ವಾಹನ ಹೊಂದಿದ್ದ ಆರೋಪಿಗಳು, ಗಾಂಜಾ ಸಾಗಿಸಲು ಸೂಕ್ತ ವ್ಯವಸ್ಥೆ ಸಿದ್ಧಪಡಿಸಿ ಕೊಂಡಿದ್ದರು. ವಾಹನಕ್ಕೆ ವಿವಿಧ ನಕಲಿ ನಂಬರ್ ಪ್ಲೇಟ್ ಬಳಸುತ್ತಿದ್ದರು. ಅಲ್ಲದೇ ಸಿನಿಮಾ ಮಾದರಿಯಲ್ಲಿ ವಾಹನದ ಗೂಡ್ಸ್ ಕಂಪಾರ್ಟ್ಮೆಂಟ್ ನ ಕೆಳಗಡೆ ಮತ್ತೊಂದು ಸೀಕ್ರೇಟ್ ಕಂಪಾರ್ಟ್ಮೆಂಟ್ ಮಾಡಿಸಿ ಕೊಂಡಿದ್ದರು. ಗಾಂಜಾ ಸಾಗಿಸುವಾಗ ಮೇಲಿನ ಗೂಡ್ಸ್ ಕಂಪಾರ್ಟ್ಮೆಂಟ್ ಭಾಗದಲ್ಲಿ ಪ್ಲಿಪ್ ಕಾರ್ಟ್ ಪಾರ್ಸೆಲ್ ಬಾಕ್ಸ್ ಗಳಲ್ಲಿಯೂ ಗಾಂಜಾ ಇರಿಸಿ ಸಾಗಿಸುತ್ತಿದ್ದುದು ಸಹ ತಿಳಿದು ಬಂದಿದೆ.. ಒಟ್ಟಿನಲ್ಲಿ ಇದೀಗ ಖತರ್ನಾಕ್ ಗಾಂಜಾ ಗ್ಯಾಂಗ್‌ನನ್ನು ಹಿಡಿಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ