Publish Date: Wed, 08 Dec 2021 (20:27 IST)
Updated Date: Wed, 08 Dec 2021 (20:33 IST)
ಉದ್ಯೋಗಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದ ಭಾಗದ 16 ಸಾವಿರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದ ಸಿಎಂ ಬೊಮ್ಮಾಯಿ. ಕಲ್ಯಾಣ ಕರ್ನಾಟಕದ ಭಾಗದ 16 ಸಾವಿರ ಹುದ್ದೆಗಳಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರವೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸೂಚಿಸಲಾಗಿದೆ.
ವಸತಿ ರಹಿತರಿಗೆ ಮಾರ್ಚ್ 31 ರೊಳಗೆ ಎಲ್ಲರಿಗೂ ಸೂರು ಕಲ್ಪಿಸುತ್ತೇವೆ. ಮುಂಬರುವ ದಿನದಲ್ಲಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.