ಯುದ್ಧ ಭೂಮಿ ಉಕ್ರೇನ್‌ ನಿಂದ 18,000 ಭಾರತೀಯರು ತಾಯ್ನಾಡಿಗೆ ವಾಪಾಸ್:‌ ಕೇಂದ್ರ

Webdunia
ಬುಧವಾರ, 9 ಮಾರ್ಚ್ 2022 (19:02 IST)
ಫೆ.22ರಿಂದ ಉಕ್ರೇನ್‌ ನಲ್ಲಿನ ಭಾರತೀಯರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಈವರೆಗೆ 18 ಸಾವಿರ ಭಾರತೀಯರನ್ನು ಮರಳಿ ಭಾರತಕ್ಕೆ ಕರೆತರಲಾಗಿದೆ ಎಂದು  ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದಾರೆ.
ಈ ಬಗ್ಗೆ ಎಎನ್‌ ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ರಕ್ಷಣಾ ಕಾರ್ಯ ಆರಂಭವಾದಾಗಿನಿಂದ ಒಟ್ಟು 18 ಸಾವಿರ ಭಾರತೀಯರು ಉಕ್ರೇನ್‌ ತೊರೆದಿದ್ದಾರೆ. 75 ವಿಶೇಷ ವಿಮಾನಗಳ ಮೂಲಕ 15521 ಭಾರತೀಯರನ್ನು ಕರೆತರಲಾಗಿದೆ. ಓಪರೇಷನ್‌ ಗಂಗಾ ಅಡಿಯಲ್ಲಿ 32 ಟನ್‌ ನಷ್ಟು ನೆರವು ಸಾಮಾಗ್ರಿಗಳನ್ನು ಕಳುಹಿಸಲಾಗಿದೆ ಎಂದರು.
ಬಚಾರೆಸ್ಟ್‌ ನಿಂದ 4575 ಭಾರತೀಯರು 21 ವಿಮಾನಗಳಲ್ಲಿ ಬಂದಿದ್ದಾರೆ, ಸುಕೆವಾದಿಂದ 1820 ಮಂದಿ 9 ವಿಮಾನಗಳ ಮೂಲಕ ಬಂದಿದ್ದಾರೆ. ಬುಡಾಪೆಸ್ಟ್‌ ನಿಂದ 5571 ಮಂದಿ 28 ವಿಮಾನಗಳಲ್ಲಿ ಆಗಮಿಸಿದ್ದಾರೆ.
909 ಭಾರತೀಯರು ಕೋಸಿಸಿಯಿಂದ 5 ವಿಮಾನಗಳಲ್ಲಿ ಬಂದಿದ್ದಾರೆ 2404 ಭಾರತೀಯರು ರೆಸ್ಜಾವ್‌ ನಿಂದ 11 ವಿಮಾನಗಳ ಮೂಲಕ ಬಂದಿದ್ದಾರೆ. ಇನ್ನು ಕೀವ್‌ ನಿಂದ 242 ಭಾರತೀಯರು ತಾಯ್ನಾಡಿಗೆ ವಾಪಾಸ್‌ ಆಗಿದ್ದಾರೆ.
ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments