Webdunia - Bharat's app for daily news and videos

Install App

2.5 ವರ್ಷ ಡಿ.ಕೆ.ಶಿವಕುಮಾರ್‌ ಸಿಎಂ-ಇಬ್ಬರು ಶಾಸಕರ ಭವಿಷ್ಯ

Webdunia
ಶನಿವಾರ, 28 ಅಕ್ಟೋಬರ್ 2023 (17:20 IST)
ರಾಜ್ಯದಲ್ಲಿ ಈ ಹಿಂದೆ ಆಪರೇಷನ್‌ ಕಮಲ ನಡೆಸಿ ಮೈತ್ರಿ ಸರ್ಕಾರ ಕೆಡವಿದ್ದ ತಂಡ ಮತ್ತೆ ಸಕ್ರಿಯವಾಗಿದೆ. ಈ ತಂಡ ಕಾಂಗ್ರೆಸ್‌ನ ಐವರು ಶಾಸಕರನ್ನು ಭೇಟಿ ಮಾಡಿ 50 ಕೋಟಿ ರು. ಹಣ, ಮಂತ್ರಿ ಸ್ಥಾನ, ಅಮಿತ್‌ ಶಾ ಭೇಟಿ ಮಾಡಿಸುವ ಆಮಿಷ ಒಡ್ಡಿದೆ ಎಂದು ಮಂಡ್ಯ ಕಾಂಗ್ರೆಸ್‌ ಶಾಸಕ ರವಿ ಗಣಿಗ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗಣಿಗ ರವಿ ಆ ತಂಡದವರು ನಮ್ಮ ಶಾಸಕರನ್ನು ಸಂಪರ್ಕಿಸಿದ ಆಡಿಯೋ, ವಿಡಿಯೋಗಳೂ ನಮ್ಮ  ಬಳಿ ಇವೆ. ಅವುಗಳನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇವೆ ಎಂದಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಮಂಡ್ಯ ಶಾಸಕ ರವಿಕುಮಾರ್‌ ಗಣಿಗ ಹಾಗೂ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ಅವರು ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ.

ಇನ್ನು ಇವರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್‌ ಕೂಡ ದನಿಗೂಡಿಸಿದ್ದು, ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಆದರೆ ಯಾವಾಗ ಆಗಬೇಕೆಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments