Webdunia - Bharat's app for daily news and videos

Install App

2,690 ಕೋಟಿ ರೂ. ಮೌಲ್ಯದ 81 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ

Webdunia
ಶುಕ್ರವಾರ, 17 ಜೂನ್ 2022 (14:34 IST)
ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ  ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು  ನೀಡಿರುವ  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಗುರುವಾರ ಸಂಜೆ ಅನುಮೋದನೆ ನೀಡಿದೆ.
ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ  ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್ಎಲ್ಎಸ್ಡಬ್ಲ್ಯುಸಿಸಿ) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.
 ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ  ಮುರುಗೇಶ್ ನಿರಾಣಿ ತಿಳಿಸಿದ್ದಾರೆ. 
ಅಲ್ಲದೆ 132ನೇ ಎಸ್ಎಲ್ಎಸ್ಡಬ್ಲ್ಯುಸಿಸಿ ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಹಾಗೂ 1,308.06 ಕೋಟಿ ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬೇಕು ಮತ್ತು ಯಾಕೆ

ನಿಮ್ಮನ್ನು ಇನ್ಯಾರು ಪ್ರಶ್ನೆ ಮಾಡಬೇಕಿತ್ತು: ರಾಹುಲ್ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಟ್ರೋಲ್

Video: ನೀವು ರಷ್ಯಾ ಜೊತೆ ವ್ಯಾಪಾರ ಮಾಡ್ತೀರಂತೆ ಎಂದಿದ್ದಕ್ಕೆ ಇಂಗು ತಿಂದ ಮಂಗನಂತಾದ ಡೊನಾಲ್ಡ್ ಟ್ರಂಪ್

Uttarkashi cloudburst: ಮೇಘಸ್ಪೋಟದಿಂದ ಉತ್ತರಕಾಶಿ ಗ್ರಾಮವಿಡೀ ಕೆಸರಿನಲ್ಲಿ ಮುಳುಗಿರುವ ವಿಡಿಯೋ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಮುಂದಿನ ಸುದ್ದಿ