Webdunia - Bharat's app for daily news and videos

Install App

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಕೇಸ್: ಇಬ್ಬರು ಆರೋಪಿಗಳ ಬಂಧನ

Webdunia
ಮಂಗಳವಾರ, 15 ಆಗಸ್ಟ್ 2017 (17:25 IST)
ಬಿ.ಸಿ. ರೋಡ್`ನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ನರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಹಿಪದ ಅಬ್ದುಲ್ ಶಾಫಿ, ಮತ್ತು ಚಾಮರಾಜನಗರದ ಪಿಎಫ್`ಐ ಕಾರ್ಯಕರ್ತ ಖಲೀಲ್ ವುಲ್ಲಾ ಬಂಧಿತರು. ಅಬ್ದುಲ್ ಶಾಫಿ ಸಹ ಪಿಎಫ್`ಐ ಕಾರ್ಯಕರ್ತ ಎನ್ನಲಾಗಿದೆ.
 

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಆರೋಪಿಗಳ ಬಂಧನದ ವಿಷಯವನ್ನ ಖಚಿತಪಡಿಸಿದ್ದಾರೆ. ಎಸ್ಪಿ, ಎಸ್ಪಿ, ಇನ್ಸ್`ಪೆಕ್ಟರ್ ಸೇರಿದಂತೆ 30 ಪೊಲೀಸ್ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಗಲು ರಾತ್ರಿ ಕಷ್ಟ ಪಟ್ಟಿದ್ದಾರೆ. ಮಂಗಳೂರು, ಬೆಂಗಳೂರು, ಕಾರವಾರ, ಹುಬ್ಬಳ್ಳಿ, ಕೇರಳ, ಮಹಾರಾಷ್ಟ್ರ, ತಮಿಳುನಾಡು ಜೈಲುಗಳಲ್ಲೂ ಪ್ರಕರಣದ ಬಗ್ಗೆ ತನಿಖೆ ಮತ್ತು ಶೋಧ ನಡೆಸಲಾಗಿದೆ ಎಂದು ಹರಿಶೇಖರನ್ ಹೇಳಿದ್ದಾರೆ.

ಕಾರ್ಯಾಚರಣೆ ನಡೆಸಿದ ತಂಡಕ್ಕೆ 25 ಸಾವಿರ ರೂ. ಬಹುಮಾನ ಘೋಷಿಸಿದ  ಹರಿಶೇಖರನ್, ಪ್ರಕರಣದಲ್ಲಿ ಇನ್ನೂ ಐದಾರು ಮಂದಿ ಕೈವಾಡವಿರುವ ಶಂಕೆ ಇದ್ದು,  ಕಾರ್ಯಾಚರಣೆ ಮುಮದುವರೆದಿದೆ ಎಂದು ತಿಳಿಸಿದರು. ಆರೋಪಿಗಳು ಸಂಚು ರೂಪಿಸಿದ ಸ್ಥಲದ ಬಗ್ಗೆಯೂ ಮಾಹಿತಿ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments