Publish Date: Fri, 22 Apr 2022 (07:46 IST)
Updated Date: Fri, 22 Apr 2022 (08:22 IST)
ಕಲಬುರಗಿ : ಇಂದು ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಲಬುರಗಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ಕರೆಯಲಾಗಿದೆ.
ಈ ಮೂಲಕ ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಬಿಜೆಪಿ ಮುಂದಾಗಿದೆ. ಇಂದು ಸಭೆಗೆ ಸ್ವಾಗತ ಕಮಾನ್ಗಳು ರಾರಾಜಿಸುತ್ತಿವೆ.
ಸೇಡಂ ರಸ್ತೆಯಲ್ಲಿರುವ ಗೀತಾನಗರದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಕೋರ್ ಕಮಿಟಿ ಪ್ರಾರಂಭಗೊಳ್ಳಿಸಲಾಗಿದೆ. ಇವರ ನೇತೃತ್ವವನ್ನು ಸಿಎಂ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಭಾ ಮತ್ತು ಅಶ್ವಥ್ ನಾರಾಯಣ್, ವಿಜಯೇಂದ್ರ, ಲಕ್ಷ್ಮಣ್ ಸೌದಿ, ನಿರ್ಮಲ್ಕುಮಾರ್ ಸುರನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.
ಕಲಬುರಗಿ, ಬೀದರ್, ಯಾದಗಿರಿ, ಮೂರು ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಸಂಸದರು, ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆ, ಕಾರ್ಯಕರ್ತರ ಕುಂದುಕೊರತೆ ಸೇರಿ ಅನೇಕ ಮಹತ್ವದ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಹೇಳಿದ್ದಾರೆ.