Webdunia - Bharat's app for daily news and videos

Install App

ಗಾಜನೂರು ಡ್ಯಾಂ ತುಂಬಲು 2 ಅಡಿ ಬಾಕಿ

Webdunia
ಗುರುವಾರ, 6 ಜುಲೈ 2023 (13:38 IST)
ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಅತಿ ಚಿಕ್ಕ ಗಾಜನೂರು ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲೂ ನೀರನ್ನು ಹೊರಬಿಡುವ ಸಾಧ್ಯತೆ ಇದೆ.. 588.24 ಮೀಟರ್ ಗರಿಷ್ಠ ಮಟ್ಟದ ಈ ಗಾಜನೂರು ಜಲಾಶಯದಲ್ಲಿ ಪ್ರಸ್ತುತ 587.54 ಮೀಟರ್ ನಷ್ಟು ನೀರಿದೆ. ಪೂರ್ಣ ಪ್ರಮಾಣದ ಭರ್ತಿಗೆ 2 ಅಡಿ ಮಾತ್ರ ಬಾಕಿ ಇದೆ.. ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ, ನದಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಕ್ಷಣದಲ್ಲೂ ನೀರು ಹೊರ ಬಿಡುವ ಸಾಧ್ಯತೆ ಇದೆ. ಅಂದಹಾಗೆ, ಹೊಸಪೇಟೆ ತುಂಗಾಭದ್ರಾ ಜಲಾಶಯ ತುಂಬಲು ತುಂಗಾ ನೀರೇ ಪ್ರಮುಖ ಆಧಾರವಾಗಿದ್ದು, ಈ ಗಾಜನೂರು ತುಂಗಾ ಜಲಾಶಯದಿಂದ ನದಿಗೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ನೀರು ಹೊರಬಿಡುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments