Webdunia - Bharat's app for daily news and videos

Install App

10 ರೂಪಾಯಿಗಾಗಿ 2 ಲಕ್ಷ ಕಳೆದುಕೊಂಡ

Webdunia
ಶನಿವಾರ, 28 ಮಾರ್ಚ್ 2015 (09:48 IST)
ರಸ್ತೆಯ ಮೇಲೆ 10 ರೂಪಾಯಿ ನೋಟನ್ನು ಬೀಳಿಸಿ ವ್ಯಕ್ತಿಯೊಬ್ಬರ ಗಮನ ಆ ಕಡೆ ಸೆಳೆದ ದುಷ್ಕರ್ಮಿಗಳು ಅವರ ಬೈಕ್‌ನಲ್ಲಿದ್ದ 2 ಲಕ್ಷ ರೂಪಾಯಿಗಳನ್ನು ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ವೈಟ್‌ಫೀಲ್ಡ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿರುವ  ಕೆ.ಆರ್.ಪುರಂ ನಿವಾಸಿ ಶಿವಕುಮಾರ್ ಭಾರೀ ಮೊತ್ತದ ಹಣ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ರಾಮಮೂರ್ತಿ ನಗರದ ಎಸ್‌ಬಿಐ ಖಾತೆಯಿಂದ ಹಣ ಡ್ರಾ  ಮಾಡಿಕೊಂಡು ಅದನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗೆ  ಜಮೆ ಮಾಡಲು ಹೋಗುತ್ತಿದ್ದಾಗ ಘಟನೆ ನಡೆದಿದೆ.
 
ಬ್ಯಾಂಕ್ ಮುಂದೆ ಬೈಕ್ ನಿಲ್ಲಿಸಿದಾಗ ಅವರ ಹತ್ತಿರ ಬಂದ ಅಪರಿಚಿತ ವ್ಯಕ್ತಿಯೊಬ್ಬ ರಸ್ತೆ ಮೇಲೆ ನಿಮ್ಮ ಹಣ ಬಿದ್ದಿದೆ ನೋಡಿ ಎಂದ. ಶಿವಕುಮಾರ್ ಕೆಳಗೆ ಬಿದ್ದಿದ್ದ 10 ರೂಪಾಯಿ ಎತ್ತುಕೊಳ್ಳಲು ಬಗ್ಗಿದಾಗ ಅವರ ಬೈಕ್ ಪೆಟ್ರೊಲ್ ಟ್ಯಾಂಕ್ ಮೇಲಿಟ್ಟಿದ್ದ 2 ಲಕ್ಷ ರೂಪಾಯಿಗಳಿದ್ದ ಬ್ಯಾಗ್ ಎತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 
 
ಸಮೀಪದ ಕಟ್ಟಡಗಳಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಕೃತ್ಯದ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments