ಅನ್ನಭಾಗ್ಯಕ್ಕೆ ಕನ್ನ: 20 ಕ್ವಿಂಟಲ್ ಅಕ್ಕಿ ವಶ

Webdunia
ಶುಕ್ರವಾರ, 8 ಫೆಬ್ರವರಿ 2019 (19:17 IST)
ಅನ್ನ ಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಅಕ್ರಮವಾಗಿ ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ಬೂಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಸಮೇತ 20 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಕ್ರಾಸ್ ಬಳಿ ಜರುಗಿದೆ.

ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ರಾಯಚೂರಿಗೆ ಸಾಗಿಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಕ್ಕಿ ವಶ ಪಡಿಸಿಕೊಂಡಿದ್ದಾರೆ. ಮಾನ್ವಿಯ ಮುರಳಿ ಹಾಗೂ ಬಾಬು ಎಂಬುವವರು ಬೂಲೆರೋ ವಾಹನದಲ್ಲಿ ಅಕ್ಕಿ ಸಾಗಿಸುತ್ತಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments