Webdunia - Bharat's app for daily news and videos

Install App

ಜಾಹೀರಾತಿಗೆ 200 ಕೋಟಿ ರೂ. ಮೀಸಲು-ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ

geetha
ಸೋಮವಾರ, 26 ಫೆಬ್ರವರಿ 2024 (18:22 IST)
ಕೋಲಾರ : ಸೋಮವಾರ ಮಾಧ್ಯಮಗಳೊಂದಿಗೆ ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ರೈತರಿಗೆ ಬರ ಪರಿಹಾರ ನೀಡಲು ಹಣವಿಲ್ಲ ಎನ್ನುವ ಸರ್ಕಾರ ತಮ್ಮ ಪೊಳ್ಳು ಸಾಧನೆಯನ್ನು ಬಣ್ಣಬಣ್ಣದ ಫೋಟೋಗಳಲ್ಲಿ ಜಾಹೀರು ಮಾಡುತ್ತಿದೆ ಎಂದು ಟೀಕಿಸಿದರು. ಪೂರಕ ಬಜೆಟ್‌ ನಲ್ಲಿ ಕಾಂಗ್ರೆಸ್‌ ಸರ್ಕಾರ 200 ಕೋಟಿ ರೂ. ಗಳನ್ನು ಜಾಹಿರಾತಿಗೆ ಮೀಸಲಾಗಿಡಲು ಲೇಖನಾನುದಾನ ಪಡೆದಿದೆ. ಇದು ಯಾರಪ್ಪನ ಮನೆ ದುಡ್ಡು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದೆ. ಯಾವತ್ತೂ ಅದನ್ನು ಜಾಹಿರಾತಿನ ಮೂಲಕ ಹೇಳಿಕೊಂಡಿರಲಿಲ್ಲ. ಈಗ ಸಿದ್ದರಾಮಯ್ಯ ಸರ್ಕಾರ ರೈತರಿಗೆ ಬರಪರಿಹಾರವಾಗಿ 6 ಸಾವಿರ ರೂ. ನೀಡುವುದಾಗಿ ಘೋಷಿಸಿತ್ತು. ಅದರಲ್ಲಿ ಶೇ 70 ರಷ್ಟು ಕೇಂದ್ರ ಸರ್ಕಾರದ ದುಡ್ಡು. ಆದರೂ ಸಹ ಕಾಂಗ್ರೆಸ್‌ ಇದನ್ನು ತನ್ನದೇ ಸಾಧನೆ ಎಂದು ಬಿಂಬಿಸಿಕೊಂಡಿತ್ತು. ಇದುವರೆಗೂ ಆ ಹಣ ರೈತರಿಗೆ ತಲುಪಿಲ್ಲ ಎಂದರು.
 
ಗ್ಯಾರೆಂಟಿ ಯೋಜನೆಗಳ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ. ನಿಮ್ಮನ್ನು ಕೊಳ್ಳೆ ಹೊಡೆದ ದುಡ್ಡಿನಲ್ಲಿ ನಿಮಗೆ ಪುಗಸಟ್ಟೆ ಗ್ಯಾರೆಂಟಿ ನೀಡಿ ಸದಾ ಜನರನ್ನು ಕೈಚಾಚುವಂತೆ ಮಾಡುವುದೇ ಕಾಂಗ್ರೆಸ್‌ ಹುನ್ನಾರವಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments