Webdunia - Bharat's app for daily news and videos

Install App

ಜಾಹೀರಾತಿಗೆ 200 ಕೋಟಿ ರೂ. ಮೀಸಲು-ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ

geetha
ಸೋಮವಾರ, 26 ಫೆಬ್ರವರಿ 2024 (18:22 IST)
ಕೋಲಾರ : ಸೋಮವಾರ ಮಾಧ್ಯಮಗಳೊಂದಿಗೆ ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ರೈತರಿಗೆ ಬರ ಪರಿಹಾರ ನೀಡಲು ಹಣವಿಲ್ಲ ಎನ್ನುವ ಸರ್ಕಾರ ತಮ್ಮ ಪೊಳ್ಳು ಸಾಧನೆಯನ್ನು ಬಣ್ಣಬಣ್ಣದ ಫೋಟೋಗಳಲ್ಲಿ ಜಾಹೀರು ಮಾಡುತ್ತಿದೆ ಎಂದು ಟೀಕಿಸಿದರು. ಪೂರಕ ಬಜೆಟ್‌ ನಲ್ಲಿ ಕಾಂಗ್ರೆಸ್‌ ಸರ್ಕಾರ 200 ಕೋಟಿ ರೂ. ಗಳನ್ನು ಜಾಹಿರಾತಿಗೆ ಮೀಸಲಾಗಿಡಲು ಲೇಖನಾನುದಾನ ಪಡೆದಿದೆ. ಇದು ಯಾರಪ್ಪನ ಮನೆ ದುಡ್ಡು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದೆ. ಯಾವತ್ತೂ ಅದನ್ನು ಜಾಹಿರಾತಿನ ಮೂಲಕ ಹೇಳಿಕೊಂಡಿರಲಿಲ್ಲ. ಈಗ ಸಿದ್ದರಾಮಯ್ಯ ಸರ್ಕಾರ ರೈತರಿಗೆ ಬರಪರಿಹಾರವಾಗಿ 6 ಸಾವಿರ ರೂ. ನೀಡುವುದಾಗಿ ಘೋಷಿಸಿತ್ತು. ಅದರಲ್ಲಿ ಶೇ 70 ರಷ್ಟು ಕೇಂದ್ರ ಸರ್ಕಾರದ ದುಡ್ಡು. ಆದರೂ ಸಹ ಕಾಂಗ್ರೆಸ್‌ ಇದನ್ನು ತನ್ನದೇ ಸಾಧನೆ ಎಂದು ಬಿಂಬಿಸಿಕೊಂಡಿತ್ತು. ಇದುವರೆಗೂ ಆ ಹಣ ರೈತರಿಗೆ ತಲುಪಿಲ್ಲ ಎಂದರು.
 
ಗ್ಯಾರೆಂಟಿ ಯೋಜನೆಗಳ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ. ನಿಮ್ಮನ್ನು ಕೊಳ್ಳೆ ಹೊಡೆದ ದುಡ್ಡಿನಲ್ಲಿ ನಿಮಗೆ ಪುಗಸಟ್ಟೆ ಗ್ಯಾರೆಂಟಿ ನೀಡಿ ಸದಾ ಜನರನ್ನು ಕೈಚಾಚುವಂತೆ ಮಾಡುವುದೇ ಕಾಂಗ್ರೆಸ್‌ ಹುನ್ನಾರವಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments