2000ರೂ ಪ್ಯಾಂಟ್ ಹಾಳು ಮಾಡಿದ ಟೈಲರ್ ..!! 10,000ರೂ ದಂಡ

Webdunia
ಮಂಗಳವಾರ, 20 ಸೆಪ್ಟಂಬರ್ 2022 (15:24 IST)
ಗ್ರಾಹಕರೊಬ್ಬರ ಪ್ರತಿಷ್ಠಿತ ಬ್ಯಾಂಡ್​ನ ಹೊಸ ಪ್ಯಾಂಟ್​ನ ಬಟ್ಟೆಯ ವಿನ್ಯಾಸ ವಿರೂಪಗೊಳಿಸಿದ ಟೈಲರ್​ಗೆ ನಗರದ ಗ್ರಾಹಕ ಹಕ್ಕು ನ್ಯಾಯಾಲಯ ಹತ್ತು ಸಾವಿರ ರುಪಾಯಿಗಳ ಪರಿಹಾರ ನೀಡುವಂತೆ ಸೂಚನೆ ನೀಡಿದೆ.
ರಾಯಣ್ಣಗೌಡ ಸಲ್ಲಿಸಿದ್ದ ದೂರಿನ ಕುರಿತು ವಿಚಾರಣೆ ನಡೆಸಿದ ಬೆಂಗಳೂರು ನಗರದ 3ನೇ ಹೆಚ್ಚುವರಿ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶರು ಪ್ಯಾಂಟ್​ ಬಟ್ಟೆಗೆ ಪಾವತಿಸಿದ 1998 ರೂ.ಗಳು, ಹೊಲಿಗೆ ವೆಚ್ಚ 550ಕ್ಕೆ ಶೇಕಡಾ 9ರ ಬಡ್ಡಿಯ ಜೊತೆಗೆ ಮಾನಸಿಕ ಹಿಂಸೆ ಅನುಭವಿಸಿದ ಪರಿಣಾಮ 5000 ರೂಪಾಯಿ ಪಾವತಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಹಲವು ದಿನಗಳ ಕಾಲ ಕಾನೂನು ಹೋರಾಟ ನಡೆಸಿದ ಪರಿಣಾಮ ಹೆಚ್ಚುವರಿಯಾಗಿ 5000 ರೂಗಳನ್ನು ನೀಡಬೇಕು ಎಂದು ಆದೇಶಿಸಿದ್ದಾರೆ.
ವಿಜಯಪುರದ ನಿವಾಸಿ ರಾಯಣ್ಣ ಗೌಡ ಎಂಬುವರು 2016 ರಲ್ಲಿ ಬೆಂಗಳೂರಿನ ನಗರದಲ್ಲಿ 1988 ರೂ.ಗಳ ಮುಖ ಬೆಲೆಯ ಪ್ರತಿಷ್ಠಿತ ಕಂಪನಿಯಲ್ಲಿ ಪ್ಯಾಂಟ್ ಬಟ್ಟೆ ಖರೀದಿಸಿದ್ದರು. ಜತೆಗೆ ಅದೇ ಮಳಿಗೆಯಲ್ಲಿದ್ದ ಟೈಲರ್‌ ಬಳಿ ಹೊಲಿಯಲು ಸೂಚಿಸಿದ್ದರು.
 
2017ರಲ್ಲಿ ಟೈಲರ್‌ನ್ನು ಸಂಪರ್ಕಿಸಿದಾಗ, ಪ್ಯಾಂಟ್ ಕಾಲಿನ ಭಾಗದಲ್ಲಿ ಹರಿದು ಹೋಗಿ ಬಟ್ಟೆವಿನ್ಯಾಸ ವಿರೂಪಗೊಂಡಿರುವುದು ಗಮನಕ್ಕೆ ಬಂದಿತ್ತು. ಈ ಬಗ್ಗೆ ರಾಯಣ್ಣಗೆ ತಿಳಿಸಿದ ಟೈಲರ್‌ಗೆ ಹೊಸ ಬಟ್ಟೆ ಪ್ಯಾಂಟ್​​​ ಹೊಲಿದು ಕೊಡುವುದಾಗಿ ಭರವಸೆ ನೀಡಿದ್ದರು. ಕೆಲ ದಿನಗಳ ಬಳಿಕ ಟೈಲರ್​ ಬಳಿ ಹೋದಾಗ ಹೊಸ ಪ್ಯಾಂಟ್​ ಹೊಲಿದಿಲ್ಲ ಎನ್ನುವುದಾಗಿ ಹೇಳಿ ಸುಮಾರು 5 ಬಾರಿ ಅಲೆದಾಡಿಸಿದ್ದ.
 
ಇದರಿಂದ ಬೇಸರಗೊಂಡಿದ್ದ ರಾಯಣ್ಣ 2017ರ ಫೆಬ್ರವರಿ 7ರಂದು ಮತ್ತೆ ಟೈಲರ್ ಸಂಪರ್ಕಿಸಿದರು. ಈ ವೇಳೆ, ನೀವು ಖರೀದಿಸಿದ್ದ ಗುಣಮಟ್ಟದ ಪ್ಯಾಂಟ್ ಮೇಟಿರಿಯಲ್ ಲಭ್ಯವಾಗುತ್ತಿಲ್ಲ ಎಂದು ವಿವರಿಸಿದ್ದರು. ಇದರಿಂದ ಮನನೊಂದಿದ್ದ ರಾಯಣ್ಣ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments