Select Your Language

Notifications

webdunia
webdunia
webdunia
webdunia

2000 ರೂ. ಚಿಲ್ಲರೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಶಾಕಿಂಗ್

2000 ರೂ. ಚಿಲ್ಲರೆ  ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಶಾಕಿಂಗ್
ಮೈಸೂರು , ಶುಕ್ರವಾರ, 17 ಮೇ 2019 (16:34 IST)
ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ಚಿಲ್ಲರೆ ಕೇಳಿದ್ದ ಎಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ಘಟನೆ ನಡೆದಿದೆ. ಚಿಲ್ಲರೆಗಾಗಿ ಉಮೇಶ್ ಎಂಬ ವ್ಯಕ್ತಿ ಅಂಗಡಿಯೊಂದಕ್ಕೆ ಬಂದಿದ್ದ.

ಮೊದಲು ಬಾರ್ ನಲ್ಲಿ ಚಿಲ್ಲರೆ ಕೇಳಿದ್ದ. ಅಲ್ಲಿ ಸಿಗದಕ್ಕೆ ಪಕ್ಕದ ಅಂಗಡಿಯಲ್ಲಿ ಕೇಳಿದ್ದ. ಈ ವೇಳೆ ಸಚೀನ್ ಹಾಗೂ ಆತನ ಸ್ನೇಹಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೀಗ ಹಲ್ಲೆಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಹೆಚ್.ಡಿ.ಕೋಟೆ ಹಳ್ಳದ ಮನುಗನಹಳ್ಳಿ ನಿವಾಸಿಯಾಗಿದ್ದಾರೆ.

ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇದೀಗ ಆಸ್ಪತ್ರೆಗೆ ಬಿಲ್ ಕಟ್ಟಲಾಗದೆ ಹಲ್ಲೆ‌ಗೊಳಗಾದ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿದ್ದಾರೆ ಕುಟುಂಬಸ್ಥರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಮೋದಿಯಿಂದ ಅನುಮೋದನೆ ಪಡೆದುಕೊಂಡಿದ್ದಾರೆ- ಸಿದ್ದರಾಮಯ್ಯ ಟ್ವೀಟ್