Select Your Language

Notifications

webdunia
webdunia
webdunia
webdunia

2014ರಲ್ಲಿ ಹಾಸನವನ್ನು ತೆಕ್ಕೆಗೆ ತೆಗೆದುಕೊಳ್ತೇವೆ: ಪರಮೇಶ್ವರ್

2014ರಲ್ಲಿ ಹಾಸನವನ್ನು ತೆಕ್ಕೆಗೆ ತೆಗೆದುಕೊಳ್ತೇವೆ: ಪರಮೇಶ್ವರ್
, ಶನಿವಾರ, 24 ಆಗಸ್ಟ್ 2013 (19:12 IST)
PR
PR
ಬೆಂಗಳೂರು: ಲೋಕಸಭಾ ಉಪಚುನಾವಣೆಯ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ವತಿಯಿಂದ ರಮ್ಯಾ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷವನ್ನು ಮಣಿಸಿದ್ದೇವೆ.

ಕಾಂಗ್ರೆಸ್ ಪಕ್ಷದ ಮುಂದಿನ ಗುರಿ ಹಾಸನ. 2014ರಲ್ಲಿ ಜೆಡಿಎಸ್ ಭದ್ರಕೋಟೆ ಹಾಸನವನ್ನು ಕೂಡ ತೆಕ್ಕೆಗೆ ಪಡೆಯುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆನ್ನೆಲುಬು ಮುರಿದಿದೆ ಎಂದೂ ಪರಮೇಶ್ವರ್ ಈ ಸಂದರ್ಭದಲ್ಲಿ ಹೇಳಿದರು.

Share this Story:

Follow Webdunia kannada