Webdunia - Bharat's app for daily news and videos

Install App

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ನಿಯಂತ್ರಿಸಲು 2025 ರ ವೇಳೆಗೆ 20 ಲಕ್ಷ ಕೋಟಿ ರೂ. ಅಗತ್ಯ

Webdunia
ಶುಕ್ರವಾರ, 19 ನವೆಂಬರ್ 2021 (20:25 IST)
ರಾಜ್ಯದಲ್ಲಿನ ಹವಾಮಾನ ವೈಪರೀತ್ಯ ನಿಯಂತ್ರಿಸಲು 2025 ರ ವೇಳೆಗೆ 20,88,041.23 ಕೋಟಿ ರೂ. ಬಜೆಟ್ ನ ಅಗತ್ಯವಿದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
2015ರ ಹವಾಮಾನ ಬದಲಾವಣೆಯ 2ನೇ ಅವೃತ್ತಿಯ ಕರಡು ಮೂಲಕ ಈ ಮೊತ್ತವನ್ನು ಅಂದಾಜಿಸಲಾಗಿದ್ದು, 2030ರ ವೇಳೆಗೆ 52,82,744.32 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಶೋಧನಾ ಸಂಸ್ಥೆಯ ಮಹಾನಿರ್ದೇಶಕ ಜಗಮೋಹನ್ ಶರ್ಮಾ, ರಾಜ್ಯದಲ್ಲಿ ಬೇಸಿಗೆ ಮತ್ತು ಚಳಿಗಾಲದಲ್ಲಿ ತಾಪಮಾನ 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್ ಗೆ ಬದಲಾಗುತ್ತದೆ. ಇದರಿಂದ ಮಳೆ ಕೂಡ ಹೆಚ್ಚಾಗಲಿದ್ದು, ರಾಬಿ ಹಾಗೂ ಖಾರೀಫ್ ಬೆಳೆಗಳ ಮೇಲೆ ಪರಿಣಾಮ ಬೀರಲಿದೆ ಎಂದರು.
ಹವಾಮಾನ ವೈಪರೀತ್ಯದ ಪರಿಣಾಮ, ಮೌಲ್ಯಮಾಪನ ಸೇರಿದಂತೆ ಇತರೆ ಪರಿಹಾರ ಕ್ರಮಗಳನ್ನು ಪಂಚಾಯತ್ ಮಟ್ಟದಿಂದ ರೂಪಿಸಬೇಕು ಎಂದು ವಿಶ್ವಸಂಸ್ಥೆ ಸಮಿತಿ ಸದಸ್ಯರಾದ ಡಾ. ಎಚ್. ಎನ್. ರವೀಂದ್ರ ನಾಥ್ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ವಿಶ್ವ ಬ್ಯಾಂಕ್ ಹವಾಮಾನ ವೈಪರೀತ್ಯ ಹಾಗೂ ಇತರೆ ಪರಿಸರ ಕಾಳಜಿ ಹೊಂದಿರುವ ಯೋಜನೆಗಳಿಗೆ ಹಣ ನೀಡುವುದಾಗಿ ತಿಳಿಸಿದ್ದು, ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ರಾಜ್ಯದ 94 ದ್ವೀಪಗಳು ಹಾಗೂ ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮಣ್ಣಿನ ಸವೆತ ಅನುಭವಿಸುತ್ತಿದೆ. ಉತ್ತರ ಕರ್ನಾಟಕ ಹಾಗೂ ಒಣ ಪ್ರದೇಶಗಳಲ್ಲಿ ಈ ಬಾರಿ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments