Webdunia - Bharat's app for daily news and videos

Install App

21 ಶಾಸಕರ ಡಬಲ್ ವೇತನಕ್ಕೆ ಬಿತ್ತು ಕತ್ತರಿ

Webdunia
ಮಂಗಳವಾರ, 26 ಸೆಪ್ಟಂಬರ್ 2017 (22:21 IST)
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕರಿಗೆ ವಿಧಾನಸಭೆ ಸಚಿವಾಲಯದಿಂದ ಶಾಸಕ ಸ್ಥಾನಕ್ಕೆ ನೀಡುತ್ತಿದ್ದ ವೇತನಕ್ಕೆ ಕತ್ತರಿ ಬಿದ್ದಿದೆ. ಈ ಕುರಿತು ಸ್ಪೀಕರ್ ಕೆ.ಬಿ.ಕೋಳಿವಾಡ ಆದೇಶದ ಮೇರೆಗೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷರಾಗಿ ಇರುವ ಶಾಸಕರು ನಿಗಮದಿಂದಲೇ ವೇತನ ಪಡೆಯಬೇಕು. ವಿವಿಧ ಸಮಿತಿಗಳ ಸದಸ್ಯರಾಗಿ ಭತ್ಯೆ ಪಡೆಯಬಹುದು. ಶಾಸಕರಿಗೆ ವೇತನ, ಭತ್ಯೆ, ಪೆಟ್ರೋಲ್, ಮನೆ ಬಾಡಿಗೆ ನೀಡುತ್ತಾರೆ. ಶಾಸಕರು ನಿಗಮ ಮಂಡಳಿ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆ ಸ್ಥಾನಮಾನ, ಭತ್ಯೆಗಳನ್ನು ಪಡೆಯುತ್ತಾರೆ. ಹೀಗಾಗಿ ಎರಡೆರಡು ಸಂಬಳ, ಭತ್ಯೆಗಳನ್ನು ಪಡೆಯುವುದಕ್ಕೆ ಸ್ಪೀಕರ್ ಬ್ರೇಕ್ ಹಾಕಿದ್ದಾರೆ.

ಇದು ಲಾಭದಾಯಕ ಹುದ್ದೆ ವ್ಯಾಪ್ತಿಗೆ ಒಳಪಡಲಿದೆ. ಇನ್ನು ಎರಡೆರಡು ಸಂಬಳ ಪಡೆದರೆ ಕಾನೂನಿನ ಉಲ್ಲಂಘನೆಯಾಗಲಿದೆ. ಇದಕ್ಕಾಗಿ ಒಂದು ಹುದ್ದೆಗೆ ಒಂದು ವೇತನ ಎಂಬ ಆದೇಶದಡಿ ವಿಧಾನಸಭೆ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಒಂದುವೇಳೆ ಎರಡೆರಡು ವೇತನ, ಭತ್ಯೆ ಪಡೆದರೆ ಶಾಸಕರ ಸ್ಥಾನಕ್ಕೆ ಕುತ್ತು ಬೀಳಲಿದೆ. ಅಂದರೆ ಸರ್ಕಾರಕ್ಕೆ ಅನರ್ಹತೆ ಮಾಡುವ ಅವಕಾಶವಿದೆ. ಈ ಮೂಲಕ ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ಆರ್.ವಿ.ದೇವರಾಜ್, ಎಂ.ಬಿ.ಟಿ.ನಾಗರಾಜ್, ಕೆ.ವಸಂತ ಬಂಗೇರ ಸೇರಿದಂತೆ 21 ಶಾಸಕರ ಡಬಲ್ ವೇತನಕ್ಕೆ ಕತ್ತರಿ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments