21 ಶಾಸಕರ ಡಬಲ್ ವೇತನಕ್ಕೆ ಬಿತ್ತು ಕತ್ತರಿ

Webdunia
ಮಂಗಳವಾರ, 26 ಸೆಪ್ಟಂಬರ್ 2017 (22:21 IST)
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕರಿಗೆ ವಿಧಾನಸಭೆ ಸಚಿವಾಲಯದಿಂದ ಶಾಸಕ ಸ್ಥಾನಕ್ಕೆ ನೀಡುತ್ತಿದ್ದ ವೇತನಕ್ಕೆ ಕತ್ತರಿ ಬಿದ್ದಿದೆ. ಈ ಕುರಿತು ಸ್ಪೀಕರ್ ಕೆ.ಬಿ.ಕೋಳಿವಾಡ ಆದೇಶದ ಮೇರೆಗೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷರಾಗಿ ಇರುವ ಶಾಸಕರು ನಿಗಮದಿಂದಲೇ ವೇತನ ಪಡೆಯಬೇಕು. ವಿವಿಧ ಸಮಿತಿಗಳ ಸದಸ್ಯರಾಗಿ ಭತ್ಯೆ ಪಡೆಯಬಹುದು. ಶಾಸಕರಿಗೆ ವೇತನ, ಭತ್ಯೆ, ಪೆಟ್ರೋಲ್, ಮನೆ ಬಾಡಿಗೆ ನೀಡುತ್ತಾರೆ. ಶಾಸಕರು ನಿಗಮ ಮಂಡಳಿ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆ ಸ್ಥಾನಮಾನ, ಭತ್ಯೆಗಳನ್ನು ಪಡೆಯುತ್ತಾರೆ. ಹೀಗಾಗಿ ಎರಡೆರಡು ಸಂಬಳ, ಭತ್ಯೆಗಳನ್ನು ಪಡೆಯುವುದಕ್ಕೆ ಸ್ಪೀಕರ್ ಬ್ರೇಕ್ ಹಾಕಿದ್ದಾರೆ.

ಇದು ಲಾಭದಾಯಕ ಹುದ್ದೆ ವ್ಯಾಪ್ತಿಗೆ ಒಳಪಡಲಿದೆ. ಇನ್ನು ಎರಡೆರಡು ಸಂಬಳ ಪಡೆದರೆ ಕಾನೂನಿನ ಉಲ್ಲಂಘನೆಯಾಗಲಿದೆ. ಇದಕ್ಕಾಗಿ ಒಂದು ಹುದ್ದೆಗೆ ಒಂದು ವೇತನ ಎಂಬ ಆದೇಶದಡಿ ವಿಧಾನಸಭೆ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಒಂದುವೇಳೆ ಎರಡೆರಡು ವೇತನ, ಭತ್ಯೆ ಪಡೆದರೆ ಶಾಸಕರ ಸ್ಥಾನಕ್ಕೆ ಕುತ್ತು ಬೀಳಲಿದೆ. ಅಂದರೆ ಸರ್ಕಾರಕ್ಕೆ ಅನರ್ಹತೆ ಮಾಡುವ ಅವಕಾಶವಿದೆ. ಈ ಮೂಲಕ ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ಆರ್.ವಿ.ದೇವರಾಜ್, ಎಂ.ಬಿ.ಟಿ.ನಾಗರಾಜ್, ಕೆ.ವಸಂತ ಬಂಗೇರ ಸೇರಿದಂತೆ 21 ಶಾಸಕರ ಡಬಲ್ ವೇತನಕ್ಕೆ ಕತ್ತರಿ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments