Webdunia - Bharat's app for daily news and videos

Install App

ಬಿಜೆಪಿ ಸರ್ಕಾರದಲ್ಲಿ 21 ಹಗರಣ: ಸದನದಲ್ಲಿ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

Sampriya
ಶುಕ್ರವಾರ, 19 ಜುಲೈ 2024 (17:03 IST)
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ತುಂಬಾ ಜೋರಾಗಿಯೇ ಸದ್ದು ಮಾಡುತ್ತಿದೆ. ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಸದನದ ಬಾವಿಗಿಳಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು  ಪಟ್ಟಿಯನ್ನು ಬಿಡುಗಡೆ ಮಾಡಿದರು. ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರು ಹಗರಣಗಳ ಪಟ್ಟಿಯನ್ನು ಓದಿದರು. ಇನ್ನೂ ಈ ಹಗರಣದಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಹೆಸರುಗಳನ್ನು ಒತ್ತಿ ಹೇಳಿದರು.

ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ತಮ್ಮ ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯವರು ಇದೀಗ ಕಾಂಗ್ರೆಸ್‌ ನಾಯಕರ ಮೇಲೆ ಬೊಟ್ಟು ಮಾಡುತ್ತಿದ್ದಾರೆ.  ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ.

ಬಿಜೆಪಿ ಅವಧಿಯಲ್ಲಿ ಲೆಕ್ಕ ಹಾಕಲಾಗದಷ್ಟು ಹಗರಣಗಳು ಬಯಲಾಗುತ್ತಲೇ ಇವೆ. ಈ ಹಗರಣಗಳ ಕುರಿತು ವಿವಿಧ ತನಿಖೆ ನಡೆಯುತ್ತಿವೆ. ಭ್ರಷ್ಟರು ಹಾಗೂ ದುರುಳರು ಜೈಲಿಗೆ ಹೋಗುವ ದಿನಗಳ ದೂರವಿಲ್ಲ ಎಂದು ಅವರು ಗುಡುಗಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments