Webdunia - Bharat's app for daily news and videos

Install App

22 ಡ್ರಗ್ ಗ್ ಪೆಡ್ಲರ್ ಗಳು ವಶಕ್ಕೆ: ಮೂರು ಬಾರ್ ಗಳಿಗೆ ನೋಟಿಸ್550

Webdunia
ಭಾನುವಾರ, 7 ನವೆಂಬರ್ 2021 (21:16 IST)
ಬೆಂಗಳೂರು: ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿಯಲ್ಲಿ ಹೊದ್ದು ಮಲಗಿದ್ದ 180 ರೌಡಿಗಳ ಮನೆ ಬಾಗಿಲು ಬಡಿದ ನಗರದ ಪಶ್ಚಿಮ ವಿಭಾಗದ ಪೊಲೀಸರು ಠಾಣೆಗೆ ಕರೆತಂದು ಇಡೀ ದಿನ ಡ್ರಿಲ್ ಮಾಡಿದ್ದಾರೆ. ಅಪರಾಧ ಚಟುವಟಿಕೆ ಮುಂದುವರೆಸಿದರೆ ತಕ್ಕ ಶಾಸ್ತಿ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು  ಡಿ.ಸಿ.ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
 
ನಗರ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಪಶ್ಚಿಮ ವಿಭಾಗದ ಕಾಟನ್ ಪೇಟೆ , ಚಾಮರಾಜಪೇಟೆ, ಜೆ.ಜೆ ನಗರ, ಕೆ.ಪಿ ಅಗ್ರಹಾರ, ಮಾಗಡಿ ರಸ್ತೆಯ ಪೊಲೀಸರು ಸೇರಿದಂತೆ ವಲಯದ ಸಿಬ್ಬಂದಿ 22  ಕ್ಕೂ ಹೆಚ್ಚು ಡ್ರಗ್ ಪೆಡ್ಲರ್ ಗಳನ್ನೂ ವಶಕ್ಕೆ ಪಡೆದು,180 ಕ್ಕಿಂತ ಜಾಸ್ತಿರೌಡಿಗಳ ಮನೆಗಳ ಮೇಲೆ ದಾಳಿ ನೆಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
 
ಇಬ್ಬರು ಎಸಿಪಿ ಗಳ ನೇತೃತ್ವದಲ್ಲಿ 600 ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಳಗ್ಗೆ 5 ಗಂಟೆಯಿಂದ ಅಂಜಪ್ಪ ಗಾರ್ಡನ್, ನೇತಾಜಿ ನಗರ , ಗೋಪಾಲಪುರ, ಶ್ಯಾಮಣ್ಣ ಗಾರ್ಡನ್, ಬಾಪೂಜಿ ನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸರ್ಚ್ ಆಪರೇಷನ್ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
 
180 ಕ್ಕೂ ಹೆಚ್ಚು ರೌಡಿಗಳನ್ನು ದಾಳಿಯ ನಂತರ ಸಂಭಂದಪ್ಪಟ ಪೊಲೀಸ್ ಠಾಣೆಗೆ ಕರೆತಂದು ರೌಡಿ ಚಟುವಟಿಕೆ ಮುಂದುವರೆಸಬಾರದು,  ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು, ಕಾನೂನಿಗೆ ಭಾಗ ತರುವಂತಹ ಕೆಲಸಗಳನ್ನು ಮಾಡಬಾರದು ಮತ್ತು  ಸಮನ್ಸ್ ಬಂದ ತಕ್ಷಣ ಕೋರ್ಟ್  ಗೆ ಹಾಜರಾಗಬೇಕು ಇಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
 
ರೌಡಿಗಳು ಸಂಜದ್ರೋಹದ ಕೆಲಸ ಬಿಟ್ಟು ಮುಖ್ಯವಾಹಿನಿಗೆ ಬಂದು ನೆಮ್ಮದಿಯ ಜೀವನ ನೆಡೆಸುವುದಾದರೆ ಪೊಲೀಸ್ ಸಿಬ್ಬಂದಿ ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಅಪರಾಧ ಚಟುವಟಿಕೆ ಮುಂದುವರೆಸಿದರೆ ತಕ್ಕ ಪಾಠ ಕಳಿಸುತ್ತಾರೆ ಎಂದಿದ್ದಾರೆ.
 
ಮೂರು ಬಾರ್ ಗಳ ವಿರುದ್ಧ ಪ್ರಕರಣ:
 
ಸಿಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬೆಳ್ಳಂ ಬೆಳಗ್ಗೆ ಬಾರ್ ಬಾಗಿಲು ತೆರೆದು ಮದ್ಯ ಮಾರಾಟ ಮಾಡುತ್ತಿದ್ದ ಮೂರು ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments