Webdunia - Bharat's app for daily news and videos

Install App

ಕರ್ನಾಟಕ ಸೇರಿ ದೇಶದಲ್ಲಿವೆ ಇಂತಹ 24 ವಿವಿಗಳು!

Webdunia
ಮಂಗಳವಾರ, 3 ಆಗಸ್ಟ್ 2021 (17:49 IST)
ಕರ್ನಾಟಕದಲ್ಲಿ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಕಲ್ಲಿ 24 ನಕಲಿ ವಿಶ್ವವಿದ್ಯಾಲಯಗಳಿವೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಬಹಿರಂಗಪಡಿಸಿದೆ.
ಲೋಕಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಸದನಕ್ಕೆ ಲಿಖಿತ ಉತ್ತರ ನೀಡಿದ್ದು, ಯುಜಿಸಿ 24 ಸ್ವಯಂ ಘೋಷಿತ ಶಿಕ್ಷಣ ಸಂಸ್ಥೆಗಳನ್ನು ನಕಲಿ ಎಂದು ಘೋಷಿಸಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಇನ್ನೂ ಎರಡು ಸಂಸ್ಥೆಗಳನ್ನು ಪತ್ತೆ ಮಾಡಿದೆ. ವಿದ್ಯಾರ್ಥಿಗಳು, ಪೋಷಕರು, ಸಾಮಾನ್ಯ ಜನರು ಮತ್ತು ವಿದ್ಯುನ್ಮಾನ ಮುದ್ರಣ ಮಾಧ್ಯಮದ ಮೂಲಕ ಪಡೆದ ದೂರುಗಳ ಆಧಾರದ ಮೇಲೆ, ಯುಜಿಸಿ 24 ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಿದೆ ಎಂದರು.
ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ ನಕಲಿ ಆಗಿದೆ. ದೇಶದ 24 ನಕಲಿ ವಿವಿಗಳ ಪೈಕಿ ಉತ್ತರ ಪ್ರದೇಶದಲ್ಲಿ 8 ನಕಲಿ ವಿಶ್ವವಿದ್ಯಾಲಯಗಳಿದ್ದು, ನಂ.1 ಸ್ಥಾನ ಪಡೆದಿದೆ. ಈ ಪೈಕಿ ವಾರಣಾಸಿಯ ಸಂಸ್ಕೃತ ವಿಶ್ವವಿದ್ಯಾಲಯ; ಮಹಿಳಾ ಗ್ರಾಮ ವಿದ್ಯಾಪೀಠ, ಅಲಹಾಬಾದ್; ಗಾಂಧಿ ಹಿಂದಿ ವಿದ್ಯಾಪೀಠ, ಅಲಹಾಬಾದ್; ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ; ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ, ಅಲಿಘರ್; ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಮಥುರಾ; ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ  ವಿಶ್ವವಿದ್ಯಾಲಯ, ಪ್ರತಾಪಘರ್ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್, ನೋಯ್ಡಾ ಇವುಗಳನ್ನು ನಕಲಿ ವಿವಿಗಳೆಂದು ಗುರುತಿಸಲಾಗಿದೆ.
ಅಂತೆಯೇ ದೆಹಲಿಯಲ್ಲಿ ಅಂತಹ ಏಳು ನಕಲಿ ವಿಶ್ವವಿದ್ಯಾಲಯಗಳಿದ್ದು, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಷನಲ್ ಯೂನಿವರ್ಸಿಟಿ, ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ, ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್,  ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ಮತ್ತು ಅಧ್ಯತ್ಮಿಕ್ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ) ನಕಲಿ ವಿವಿಗಳು ಎಂದು ಘೋಷಿಸಲಾಗಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ತಲಾ ಎರಡು ವಿಶ್ವವಿದ್ಯಾಲಯಗಳಿದ್ದು, ಈ ಪೈಕಿ ಕೋಲ್ಕತ್ತಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಮತ್ತು ಕೋಲ್ಕತ್ತಾದ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್ ಮತ್ತು ರೂರ್ಕೆಲಾದ ನವಭಾರತ್ ಶಿಕ್ಷಾ ಪರಿಷತ್ ಮತ್ತು ಉತ್ತರ ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ನಕಲಿ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments