Webdunia - Bharat's app for daily news and videos

Install App

ಮೇಕೆದಾಟು ಯೋಜನೆಗೆ 25 ಕೋಟಿ ರೂ. ಬಿಡುಗಡೆ: ಸಿದ್ದರಾಮಯ್ಯ

Webdunia
ಭಾನುವಾರ, 29 ಮಾರ್ಚ್ 2015 (15:20 IST)
ಮೇಕೆದಾಟು ಯೋಜನೆಗೆ 25 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಗಡಿ ತಾಲೂಕು ಸೋಲೂರಿನಲ್ಲಿ ಹೇಳಿದರು.  ಯಾವ ಕಾರಣಕ್ಕೂ ಮೇಕೆದಾಟು ಯೋಜನೆ ಕೈಬಿಡುವುದಿಲ್ಲ ಎಂದು ಸಿಎಂ ಹೇಳಿದರು. ಯಾವುದೇ ಕಂಟಕಗಳು ಎದುರಾದರೂ ಮೇಕೆದಾಟು ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಈ ಸಂದರ್ಭದಲ್ಲಿ ಸಿಎಂ ಹೇಳಿದರು.

 ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ 48 ಟಿಎಂಸಿ ನೀರು ಸಂಗ್ರಹಿಸುವ ಕರ್ನಾಟಕದ ಯೋಜನೆಗೆ ತಮಿಳುನಾಡು ರೈತರು ವಿರೋಧ ವ್ಯಕ್ತಪಡಿಸಿದ್ದು, ಅನೇಕ ಜಿಲ್ಲೆಗಳಲ್ಲಿ ಬಂದ್ ಆಚರಿಸಿದ್ದಾರೆ. ರೈತರ ವಿರೋಧಕ್ಕೆ ರಾಜಕೀಯ ಪಕ್ಷಗಳು ಕೂಡ ಕೈಗೂಡಿಸಿವೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಹೊರಬಿದ್ದಿದೆ.

 ಮೇಕೆದಾಟು ಯೋಜನೆಯ ಮೂಲಕ ನೀರು ಸಂಗ್ರಹ ಮಾಡಿ ಕೋಲಾರ, ಚಿಕ್ಕಬಳ್ಳಾಪುರ ಮುಂತಾದ ನೀರಿನ ಅಭಾವದ ಪ್ರದೇಶಗಳಿಗೆ ನೀರು ಪೂರೈಕೆ ಮಾಡುವುದು ಯೋಜನೆಯ ಉದ್ದೇಶವಾಗಿದೆ. ರಾಜ್ಯದಲ್ಲಿ ಮತ್ತೆ ಸಾರಾಯಿ ಮಾರಾಟ ಆರಂಭಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದೂ ಸಿಎಂ ಈ ಸಂದರ್ಭದಲ್ಲಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments