Webdunia - Bharat's app for daily news and videos

Install App

ರಾಜ್ಯದ 10 ಜಿಲ್ಲೆಗಳ 25 ತಾಲ್ಲೂಕುಗಳು 'ಪ್ರವಾಹ ಪೀಡಿತ : ರಾಜ್ಯ ಸರ್ಕಾರ ಘೋಷಣೆ

Webdunia
ಗುರುವಾರ, 19 ಆಗಸ್ಟ್ 2021 (08:09 IST)
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ 10 ಜಿಲ್ಲೆಗಳ 25 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ರಶ್ಮಿ ಎಂ ಎಸ್ ಆದೇಶ ಹೊರಡಿಸಿದ್ದು, ರಲ್ಲಿ ಮುಂಗಾರು ಋತುವಿನ ಜುಲೈ 2021 ರಲ್ಲಿ ಅತಿವೃಷ್ಟಿ ಹಾಗೂ ನದಿ ಹರಿವಿನಿಂದ ಪ್ರವಾಹ ಸಂಭವಿಸಿದ್ದು, ಅಪಾರ ಪ್ರಮಾಣದಲ್ಲಿ ಜೀವ ಹಾನಿ, ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರಲಾಗಿರುತ್ತದೆ.
ಮುಂದುವರೆದು, ಜುಲೈ 2021 ರ ತಿಂಗಳಿನಲ್ಲಿ ಪ್ರವಾಹ ಎದುರಿಸಿದ ರಾಜ್ಯದ 10 ಜಿಲ್ಲೆಗಳ 25 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ದಾವಣಗೆರೆ, ಧಾರವಾಡ, ವಿಜಯಪುರ, ವಿಜಯನಗರ, ಗದಗ, ಬೆಳಗಾವಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಶಿವಮೊಗ್ಗ ಸೇರಿದಂತೆ 10 ಜಿಲ್ಲೆಗಳ 25 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಚನ್ನಗಿರಿ, ದಾವಣಗೆರೆ, ಅಣ್ಣಿಗೇರಿ, ಹುಬ್ಬಳ್ಳಿ ನಗರ, ಹುಬ್ಬಳ್ಳಿ ತಾಲ್ಲೂಕು, ಬಬಲೇಶ್ವರ, ನಿಡಗುಂದಿ, ಕೋಲ್ಹಾರ, ಮುದ್ದೆಬಿಹಾಳ, ಹರಪನಹಳ್ಳಿ, ಲಕ್ಷ್ಮೀಶ್ವರ, ಬೆಳಗಾವಿ, ಚಿಕ್ಕಮಗಳೂರು, ಕಡೂರು ತರೀಕೆರೆ, ಮೂಡಿಗೆರೆ, ಕೊಪ್ಪ, ಶೃಂಗೇರಿ, ದಾಂಡೇಲಿ, ಸೂಪ, ಮುಂಡಗೋಡು, ಆಲೂರು, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ಸೇರಿದಂತೆ 25 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ ತಾಲ್ಲೂಕುಗಳಲ್ಲಿ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರ್ಕಾರದ ಆದೇಶ/ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರದ ಕಾರ್ಯದರ್ಶಿ ರಶ್ಮಿ ಎಂ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments