Webdunia - Bharat's app for daily news and videos

Install App

ಅಬಕಾರಿಯಿಂದ 2591 ಕೋಟಿ ರಾಜಸ್ವ ಸಂಗ್ರಹ

Webdunia
ಬುಧವಾರ, 6 ಮೇ 2020 (21:59 IST)
ಅಬಕಾರಿಯಿಂದ ಈ ಜಿಲ್ಲೆಯಲ್ಲಿ 2591.82 ಕೋಟಿ ರೂ. ರಾಜಸ್ವ ಸಂಗ್ರಹಣೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯಿಂದ 2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ  ಮದ್ಯ ಮಾರಾಟದಿಂದ ಹಾಗೂ ಜಿಲ್ಲೆಯಲ್ಲಿರುವ ಡಿಸ್ಟಿಲರಿ, ಬ್ರೀವರಿಯಿಂದ ಮತ್ತು ಅಬಕಾರಿ ಅಕ್ರಮಗಳ ಸಂಬಂಧ 2,301 ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಕೆಲವು ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟಾರೆ ಮದ್ಯ ಮಾರಾಟ ಹಾಗೂ ವಿವಿಧ ರೀತಿಯ ಸನ್ನದು ಶುಲ್ಕದಿಂದ 2591.82 ಕೋಟಿ ರೂ. ರಾಜಸ್ವ ಸಂಗ್ರಹಣೆ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಗೋಪಾಲಕೃಷ್ಣ ಗೌಡ ತಿಳಿಸಿದ್ದಾರೆ.

2,301 ದಾಳಿ ನಡೆಸಲಾಗಿದ್ದು, ಅದರಲ್ಲಿ 188 ಘೋರ, 4 ಎನ್.ಡಿ.ಪಿ.ಎಸ್. (ಗಾಂಜಾ), 852 ಲಘು, 402 ಸನ್ನದು ಷರತ್ತು ಉಲ್ಲಂಘನೆ, 494 ಆರೋಪಿಗಳನ್ನು ದಸ್ತಗಿರಿಗೊಳಿಸಲಾಗಿದೆ. 53 ವಾಹನಗಳು, 1901.123 ಲೀ. ಮದ್ಯ, 551.130 ಲೀ. ಬಿಯರ್, 231.000 ಲೀ. ಸೇಂದಿ, 76.000 ಲೀ. ಕಳ್ಳಭಟ್ಟಿ, 745.000 ಲೀ. ಬೆಲ್ಲದಕೊಳೆ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments