Webdunia - Bharat's app for daily news and videos

Install App

ದಾವೂದ್ ಇಬ್ರಾಹಿಂ ಸುಳಿವು ಕೊಟ್ಟವರಿಗೆ 25 ಲಕ್ಷ ಬಹುಮಾನ

Webdunia
ಗುರುವಾರ, 1 ಸೆಪ್ಟಂಬರ್ 2022 (16:36 IST)
ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಭಾರತದ ಭಯೋತ್ಪಾದಕ ನಿಗ್ರಹ ದಳ ಘೋಷಿಸಿದ್ದು, ಮುಂಬೈ ಸ್ಫೋಟ ರೂವಾರಿಗಳ ನೂತನ ಫೋಟೊಗಳನ್ನು ಬಿಡುಗಡೆಗೊಳಿಸಿದೆ.
ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ ಐಎ), ದಾವೂದ್ ಇಬ್ರಾಹಿಂ ಗ್ಯಾಂಗ್ ನ ಕಿಂಗ್ ಪಿನ್ ಛೋಟಾ ಶಕೀಲ್ ಹಾಗೂ ಇತರ ಉಗ್ರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ, ಟೈಗರ್ ಮೆಮೊನ್ ವಿರುದ್ಧ ತಲಾ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
 
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಇತರ ನಟೋರಿಯಸ್ ಉಗ್ರರು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ, ಜೈಶ್ ಎ ಮೊಹಮ್ಮದ್, ಅಲ್ ಖೈದಾ ಜೊತೆ ಕೈಜೋಡಿಸುವ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ ಐಎ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
 
ದಾವೂದ್ ಇಬ್ರಾಹಿಂ 1993ರಲ್ಲಿ ವಾಣಿಜ್ಯ ನಗರಿ ಮುಂಬೈನ ವಿವಿಧೆಡೆ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ರೂವಾರಿಯಾಗಿದ್ದಾನೆ. ಅಂದು ಸಂಭವಿಸಿದ್ದ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆ ಬಳಿಕ ದಾವೂದ್ ಇಬ್ರಾಹಿಂನನ್ನು ಅಂತರಾಷ್ಟ್ರೀಯ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments