Webdunia - Bharat's app for daily news and videos

Install App

ವಕ್ಫ್‌ ಮಂಡಳಿಯ 29ಸಾವಿರ ಎಕರೆಗಳಷ್ಟು ಆಸ್ತಿ ಪ್ರಭಾವಿಗಳು, ರಾಜಕೀಯ ಮುಖಂಡರಲ್ಲಿದೆ

Sampriya
ಬುಧವಾರ, 20 ನವೆಂಬರ್ 2024 (18:17 IST)
photo Courtesy x
ಮಂಗಳೂರು: ವಕ್ಫ್‌ ಮಂಡಳಿಗೆ ಸೇರಿರುವ 29ಸಾವಿರ ಎಕರೆಗಳಷ್ಟು ಆಸ್ತಿಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಭಾವಿಗಳು ಕಬಳಿಕೆ ಮಾಡಿಕೊಂಡಿದ್ದಾರೆ. ನಾನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷನಾಗಿದ್ದಾಗ ಸಲ್ಲಿಸಿದ್ದ ವರದಿಯ ಆಧಾರದಲ್ಲಿ, ತನಿಖೆ ನಡೆಸಿ, ಪ್ರಭಾವಿಗಳು ಕಬಳಿಕೆ ಮಾಡಿರುವ ಆಸ್ತಿಗಳನ್ನು ಮರಳಿ ವಶಕ್ಕೆ ಪಡೆದದ್ದೇ ಆದಲ್ಲಿ ರೈತರಿಗೆ ನೋಟಿಸ್ ನೀಡುವ ಪ್ರಮೇಯವೇ ಎದುರಾಗುವುದಿಲ್ಲ ಎಂದು ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಹೇಳಿದರು.

ಅವರು ಇಂದು ಆರ್ಯಸಮಾಜದಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಜೊತೆ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಕ್ಫ್‌ ಮಂಡಳಿಯ ನೋಂದಾಯಿತ ಅಸ್ತಿ  54 ಸಾವಿರ ಎಕರೆ ಇರುವಾಗ, ಇದೀಗ ರೈತರಿಗೆ ನೋಟಿಸ್ ನೀಡುವ ಅಗತ್ಯವೇನು. ನನ್ನ ವರದಿಯ ಆಧಾರದಲ್ಲಿ ಹಳೆಯ ಗಜೆಟ್ ಅಧಿಸೂಚನೆಗಳ ಆಧಾರದಲ್ಲಿ ತನಿಖೆ ನಡೆಸಿದ್ದಲ್ಲಿ ವಕ್ಫ್‌ ಮಂಡಳಿಯ ನಿಜವಾದ ಆಸ್ತಿ ಎಷ್ಟು? ಕಬಳಿಕೆ ಆಗಿದ್ದೆಷ್ಟು ಎಂಬ ಸ್ಪಷ್ಟ ಚಿತ್ರಣ ಸಿಗಗುತ್ತದೆ ಎಂದರು.

ರಾಜ್ಯದಲ್ಲಿ ವಕ್ಫ್‌ ಮಂಡಳಿಯಲ್ಲಿ ನೋಂದಾಯಿತ ಆಸ್ತಿಯ ಪ್ರಮಾಣ 54 ಸಾವಿರ ಎಕರೆಗಳಷ್ಟಿದೆ. ಅದರಲ್ಲಿ ಪ್ರಭಾವಿಗಳು ಕಬಳಿಕೆ ಮಾಡಿಕೊಂಡಿರುವ ಆಸ್ತಿಯ ಮೌಲ್ಯ 2012ರಲ್ಲಿ ₹ 2.30 ಲಕ್ಷ ಕೋಟಿಗಳಷ್ಟಿತ್ತು. ಈ ಜಮೀನುಗಳಲ್ಲಿ ಈಗಾಗಲೇ ಪ್ರಭಾವಿಗಳು, ರಾಜಕೀಯ ಮುಖಂಡರು ವಾಣಿಜ್ಯ ಸಂಕೀರ್ಣ, ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನೆಲ್ಲ ನಿರ್ಮಿಸಿದ್ದಾರೆ. ಇದು ಸರಿಯಾದ ಮಾದರಿಯಲ್ಲಿ ತನಿಖೆ ಆದಲ್ಲಿ ಅನೇಕರು ಜೈಲು ಸೇರುತ್ತಾರೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ನಿಜವಾಗಲು ಮುಸ್ಲಿಮರ ಪರ ಕಾಳಜಿ ಇದ್ದರೆ, ನಾನು ದಾಖಲೆ ಸಮೇತ ನೀಡಿರುವ ವರದಿಯನ್ನು ಆಧರಿಸಿ ಸಮಗ್ರ ತನಿಖೆ ನಡೆಸಲಿ ಎಂದು ಸವಾಲೆಸೆದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments