Webdunia - Bharat's app for daily news and videos

Install App

ಇಂದು ಶಿವಮೂರ್ತಿ ವಿರುದ್ಧದ 2ನೇ ಕೇಸ್ ತೀರ್ಪು

Webdunia
ಸೋಮವಾರ, 20 ನವೆಂಬರ್ 2023 (15:00 IST)
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ದದ 2ನೇ ಫೋಕ್ಸೋ ಕೇಸ್ ಹಿನ್ನೆಲೆಯಲ್ಲಿ, ಶಿವಮೂರ್ತಿ ಶರಣರಿಗೆ ಮತ್ತೆ ಬಂಧನದ ವಾರೆಂಟ್ ಕೊಡುವ ಸಂಬಂಧ ಇಂದು ಕೋರ್ಟ್​ ತನ್ನ ತೀರ್ಪು ನೀಡಲಿದೆ. ನವೆಂಬರ್ 16ರಂದು ಶಿವಮೂರ್ತಿ ಶರಣರಿಗೆ ಬಂಧನ ವಾರೆಂಟ್​ ಹೊರಡಿಸುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಈಗಾಗಲೇ 2ನೇ ಫೋಕ್ಸೋ ಕೇಸ್ ವಿಚಾರಣೆಗೆ ಹೈ ಕೋರ್ಟ್​ ತಡೆಯಾಜ್ಞೆ ನೀಡಿದೆ.

ಹಾಗಾಗಿ ಶಿವಮೂರ್ತಿ ಶರಣರಿಗೆ ಬಂಧನದ ವಾರೆಂಟ್​ ನೀಡುವ ಅಗತ್ಯವಿಲ್ಲವೆಂದು ಶಿವಮೂರ್ತಿ ಶರಣರ ಪರ ವಕೀಲ ಉಮೇಶ್ ಪ್ರತಿವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕೋಮಲ, ಹೈ ಕೋರ್ಟ್​ ನಿಂದ ಸ್ಪಷ್ಟನೆ ತರುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದರು. ಅಲ್ಲದೆ ಶಿವಮೂರ್ತಿ ಶರಣರು ಚಿತ್ರದುರ್ಗ ಪ್ರವೇಶಿಸುವಂತಿಲ್ಲ ಎಂಬ ಶರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments