Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 2ನೇ ದಿನದ ಕಂಬಳ ಉತ್ಸವ

Webdunia
ಭಾನುವಾರ, 26 ನವೆಂಬರ್ 2023 (14:44 IST)
ರಾಜಧಾನಿ, ಸಿಲಿಕಾನ್​ ಸಿಟಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡಿನ ವೈಭವ ತೆರೆದುಕೊಂಡಿದೆ. ಇದೇ ನಗರದಲ್ಲಿ ಮೊದಲ ಬಾರಿಗೆ ಕಂಬಳ ಪಂದ್ಯ ನಡೆಯುತ್ತಿದೆ. “ಬೆಂಗಳೂರು ಕಂಬಳ ನಮ್ಮ ಕಂಬಳ”ಕ್ಕೆ ಶನಿವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಮೊದಲ ದಿನ ಕರಾವಳಿ ಕರ್ನಾಟಕದ ಆಹಾರ, ಸಂಸ್ಕೃತಿ ಜನರನ್ನು ಆಕರ್ಷಿಸಿತು. ಶನಿವಾರ ಬೆಳಿಗ್ಗೆಯಿಂದ ಆರಂಭವಾದ ಕಂಬಳ ಪ್ಯಂದಾವಳಿಗಳು ಮಧ್ಯರಾತ್ರಿವರೆಗು ನಡೆದವು.

ಕೊನೆಯ ಮತ್ತು ಎರಡನೇ ದಿನವಾದ ಇಂದು ಬೆಂಗಳೂರು ಕಂಬಳ ಹಲವು ವಿಶೇಷತೆಗಳಿಂದ ಕೂಡಿದೆ. ಕಂಬಳ ಬೆಳ್ಳಗ್ಗೆಯಿಂದ ಆರಂಭವಾಗಿ ಮಧ್ಯರಾತ್ರಿಯವರೆಗೂ ನಡೆಯಲಿದೆ. ರವಿವಾರ ಕಡೆಯ ದಿನವಾದ್ದರಿಂದ ಲಕ್ಷಂತರ ಸಂಖ್ಯೆಯಲ್ಲಿ ಜನರು ಬರಲಿದ್ದು, ಪ್ಯಾಲೇಸ್ ಗ್ರೌಂಡ್ ಸುತ್ತ-ಮುತ್ತ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಬೆಂಗಳೂರು ಕಂಬಳ ವೀಕ್ಷಣೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ, ತೆಲುಗು ನಟಿ ಅನುಷ್ಕಾ ಶೆಟ್ಟಿ ಬರುವ ಸಾಧ್ಯತೆ ಇದೆ.

ಕಂಬಳವನ್ನು ಕಣ್ತುಂಬಿಕೊಳ್ಳಲು ಇವತ್ತು ಕೂಡ ಘಟಾನುಘಟಿ ರಾಜಕೀಯ ನಾಯಕರು ಬರುತ್ತಿದ್ದಾರೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬೆಳಿಗ್ಗೆ ಸುಮಾರು 10 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿದಂತೆ ಇನ್ನೂ ಅನೇಕ ಹಿರಿಯ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments