Select Your Language

Notifications

webdunia
webdunia
webdunia
webdunia

ಕಾಫಿನಾಡಲ್ಲಿ ಬರಕ್ಕೆ 2ನೇ ಬಲಿ

ಆತ್ಮಹತ್ಯೆ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ರೈತ ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಚಿಕ್ಕಮಗಳೂರಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಮಳೆ ಬಾರದ ಹಿನ್ನೆಲೆ ಬೆಳೆ ನಾಶವಾಗಿವೆ. ಈ ಹಿನ್ನೆಲೆ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾಗಿ ಹೋಗಿದೆ.. ಬೆಳೆ ಬೆಳೆಯಲು ಈತ ಸುಮಾರು 5 ಲಕ್ಷದವರೆಗೆ ಸಾಲ ಮಾಡಿಕೊಂಡಿದ್ದನಂತೆ. ಬೆಳೆ ಕೈಕೊಟ್ಟಿದ್ರಿಂದ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ.. ಅಜ್ಜಂಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಇನ್ನು  ಚಿಕ್ಕಮಗಳೂರು ಜಿಲ್ಲೆಯ ಗಿರಿಯಾಪುರ ರೈತ ಸತೀಶ್​​ ಸಹ ಬರದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಕರಣದ ತನಿಖೆಗೆ ಆದೇಶ ನೀಡಿದ್ದೇನೆ