Select Your Language

Notifications

webdunia
webdunia
webdunia
webdunia

ಸಾಹಿತ್ಯ ಸಮ್ಮೇಳನಕ್ಕೆ ಸರಕಾರಿ ನೌಕರರಿಂದ 3 ಕೋಟಿ ದೇಣಿಗೆ

ಸಾಹಿತ್ಯ ಸಮ್ಮೇಳನಕ್ಕೆ ಸರಕಾರಿ ನೌಕರರಿಂದ 3 ಕೋಟಿ ದೇಣಿಗೆ
ಕಲಬುರಗಿ , ಮಂಗಳವಾರ, 4 ಫೆಬ್ರವರಿ 2020 (15:07 IST)
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರಿಂದ ಒಂದು ದಿನದ ವೇತನ ರೂಪವಾಗಿ 3 ಕೋಟಿ ರೂ.ಗಳ ದೇಣಿಗೆ ನೀಡಿದ್ದಾರೆ.

ಕಲಬುರಗಿಯಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ 3 ಕೋಟಿ ರೂ. ಚೆಕ್ಕನ್ನು ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ನೀಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ನೌಕರರ ಪರವಾಗಿ ಡಿ.ಸಿ. ಅವರಿಗೆ ಚೆಕ್ ಹಸ್ತಾಂತರಿಸಿದ್ರು.

ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ, ನೃಪತುಂಗನ ನಾಡಿನಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಜಿಲ್ಲೆಯ ನೌಕರ ಬಾಂಧವರು ತಮ್ಮ ಒಂದು ದಿನದ ವೇತನ ದೇಣಿಗೆ ನೀಡುವುದರ ಮೂಲಕ ಸಮ್ಮೇಳನದ ಯಶಸ್ವಿಗೆ ಅಗತ್ಯ ಆರ್ಥಿಕ ಸಹಕಾರ ನೀಡಿರುವುದಕ್ಕೆ ವಿಶೇಷವಾಗಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತು ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರಿಗೆ ಜಿಲ್ಲಾಡಳಿತ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.   



Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಗೆ ಸಮ್ಮೇಳನಾಧ್ಯಕ್ಷರ ಆಗಮನ : ಭವ್ಯ ಸ್ವಾಗತ