ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ ಮೂರು ಪ್ರಯಾಣಿಕರು ಸಜೀವ ದಹನವಾದ ಘಟನೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ದುರ್ಗಾಂಬ ಟ್ರಾವೆಲ್ಸ್ಗ ಸೇರಿದ ಬಸ್ ಹುಬ್ಬಳ್ಳಿ ಸಮೀಪದ ವರೂರು ಬಳಿ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಮೂವರ ಸಜೀವವಾಗಿ ದಹನವಾಗಿದ್ದು, 8 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಖಾಸಗಿ ಬಸ್ನಲ್ಲಿ ಕೆಮಿಕಲ್ ಹಾಗೂ ಸಿಗರೇಟ್ ವಸ್ತುಗಳು ಪತ್ತೆಯಾಗಿದ್ದು, ಶಾರ್ಟ್ ಸರ್ಕಿಟ್ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ