Webdunia - Bharat's app for daily news and videos

Install App

ಕಿಡ್ನಾಪ್ ಆದ 3 ಗಂಟೆಗಳಲ್ಲಿ ಆರೋಪಿಗಳು ಅಂದರ್ ... ರೋಚಕ ಸ್ಟೋರಿ

Webdunia
ಮಂಗಳವಾರ, 19 ಜುಲೈ 2022 (19:48 IST)
ವಿದ್ಯಾರ್ಥಿಯನ್ನು ಅಪಹರಿಸಿಕೊಂಡು ಹೋಗುತ್ತಿದ್ದ ನಾಲ್ವರು ಅಪಹರಣಕಾರರನ್ನು ಕಾರಿನ ಸಮೇತ ಚಿತ್ರದುರ್ಗ ಪೊಲೀಸರ ಸಹಾಯದಿಂದ ಯಲಹಂಕ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ.
ವಿದ್ಯಾರ್ಥಿ ಅಪಹರಣವಾಗಿರುವ ವರದಿ ದಾಖಲಾದ 3 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ ಮೂಲದ ರಮೇಶ್ ರಾಥೋಡ್(43), ರಿಜ್ವಾನ್ ಪಟೇಲ್(23), ಇಂದ್ರಜಿತ್ ಪವಾರ್(23) ಮತ್ತು ಹರೀಶ್‍ಕುಮಾರ್(24) ಬಂಧಿತ ಅಪಹರಣಕಾರರು. ಆರೋಪಿಗಳಿಂದ ಇನ್ನೇವಾ ಕಾರು ಹಾಗೂ ಫಾರ್ಚೂನ್ ಕಾರುಗಳನ್ನು ವಶಪಡಿಸಿಕೊಂಡು ವಿದ್ಯಾರ್ಥಿ ಜಗದೀಶ್‍ನನ್ನು ರಕ್ಷಿಸಲಾಗಿದೆ.
 
ಆಂಧ್ರಪ್ರದೇಶ ಮೂಲದ ಜಗದೀಶ್ ನಗರದ ರೇವಾ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ಬಾಗಲೂರಿನಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದಾನೆ. ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಜಗದೀಶ ಕಾಲೇಜು ಮುಗಿಸಿಕೊಂಡು ರೂಮ್‍ಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರು ಅಪಹರಣಕಾರರು ಜಗದೀಶನನ್ನು ಅಡ್ಡಗಟ್ಟಿ ಅಪಹರಿಸಿಕೊಂಡು ಹೋಗುತ್ತಿದ್ದರು.
 
ಈ ಬಗ್ಗೆ ಯಲಹಂಕ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾರು ಯಾವ ಮಾರ್ಗದಲ್ಲಿ ಹೋಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿದಾಗ ಚಿತ್ರದುರ್ಗ ಕಡೆ ಸಾಗುತ್ತಿರುವುದು ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಉಚ್ಛಾಟನೆಗೆ ಹೆದರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ರು: ಜೆಡಿಎಸ್ ಲೇವಡಿ

Dharmasthala: ಪೊಲೀಸರ ಮುಂದೆ ಗೋಗೆರೆದ ಚಿನ್ನಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments