ಮೂರು ತಿಂಗಳ ಹಿಂದೆಯೇ ಉದ್ಘಾಟನೆಯಾದ ಅಂಡರ್ ಪಾಸ್ ಕುಸಿತ

Webdunia
ಸೋಮವಾರ, 10 ಅಕ್ಟೋಬರ್ 2022 (17:27 IST)
ಬೆಂಗಳೂರಿನ ಕುಂದಲಹಳ್ಳಿಯ  ಬಳಿ ಮೂರು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್​ಪಾಸ್  ನಿರ್ಮಾಣಗೊಂಡಿದೆ. ಆದ್ರೆ ಈ ಅಂಡರ್​​ಪಾಸ್ ಕೇವಲ ಮೂರು ತಿಂಗಳಲ್ಲಿ ಕುಸಿದಿದ್ದು, ಸಾರ್ವಜನಿಕರು  ಆಕ್ರೋಶ ಹೊರಹಾಕಿದ್ದಾರೆ.
 
ಹೂಡಿ ಮುಖ್ಯ ರಸ್ತೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕುಂದನಹಳ್ಳಿಯಲ್ಲಿ ಅಂಡರ್​ಪಾಸ್ ಕುಸಿದಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪೈಪ್‌ಲೈನ್ ಸೋರಿಕೆಯಾಗಿದ್ದರಿಂದಲೇ ಅಂಡರ್​ಪಾಸ್ ಕುಸಿತ ಕಂಡಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
 
2019ರಲ್ಲಿ ಅಂಡರ್​ಪಾಸ್​ ಕಾಮಗಾರಿ ಶುರುವಾಗಿತ್ತು. ಮೂರು ತಿಂಗಳ ಹಿಂದೆಯಷ್ಟೇ ಈ ಅಂಡರ್​ಪಾಸ್ ಉದ್ಘಾಟನೆ ಆಗಿತ್ತು. ಆದ್ರೆ ಈಗ ಮಳೆಯಿಂದಾಗಿ ಅಂಡರ್​ಪಾಸ್​​ ಹಂತ ಹಂತವಾಗಿ ಕುಸಿಯಲು ಆರಂಭಿಸಿದೆ.
 
ಇನ್ನು ಪೈಪ್​ಲೈನ್ ಸೋರಿಕೆಗೊಂಡ ಕಾರಣ ಈ ಭಾಗದಲ್ಲಿ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗ ಕುಸಿದ ರಸ್ತೆಗೆ ಜಲ್ಲಿ ಕಲ್ಲು ಹಾಕಲಾಗಿದೆ. ಸದ್ಯ ರಸ್ತೆ ಸರಿಪಡಿಸಲು ಕೆಲವು ದಿನಗಳು ಬೇಕಾಗಬಹುದು. ವಾರ್ಷಿಕ ನಿರ್ವಹಣೆ ಮತ್ತು ನ್ಯೂನತೆ ಹೊಣೆಗಾರಿಕೆ ಷರತ್ತುಗಳು ಅನ್ವಯ ಆಗುವ ಕಾರಣ ಗುತ್ತಿಗೆದಾರರು ಮತ್ತೆ ಹೊಸ ಬಿಲ್ ಸಲ್ಲಿಕೆ ಮಾಡಲು ಬರಲ್ಲ. ಹಾಗಾಗಿ ಕಾಮಗಾರಿ ನಡೆಸಿದ ಗುತ್ತಿಗೆದಾರರು ರಸ್ತೆ ಸರಿಪಡಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments