3 ಡಿಸಿಎಂ ಹುದ್ದೆ ಹೇಳಿಕೆಗೆ ಶಿವಕುಮಾರ್ ಅಸಮಾಧಾನ

Webdunia
ಮಂಗಳವಾರ, 19 ಸೆಪ್ಟಂಬರ್ 2023 (08:25 IST)
ಬೆಂಗಳೂರು : ಸಚಿವ ರಾಜಣ್ಣ ಅವರ 3 ಡಿಸಿಎಂ ಹುದ್ದೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡ್ತಾರೆ ಅಂತ ಡಿಕೆ ಶಿವಕುಮಾರ್, ರಾಜಣ್ಣ ಹೇಳಿಕೆಗೆ ಆಕ್ರೋಶ ಹೊರ ಹಾಕಿದ್ದಾರೆ.

ಸಚಿವ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಚಿವ ರಾಜಣ್ಣ ಹೇಳಿಕೆ ಹಾಗೂ ಪರಮೇಶ್ವರ್ ಸ್ವಾಗತ ಮಾಡಿರೋದು ಬಹಳ ಸಂತೋಷ. ಎಲ್ಲಾ ವಿಘ್ನಕ್ಕೆ ನಾಯಕ ವಿನಾಯಕ. ಎಲ್ಲರ ಮನಸ್ಸಿಗೆ ಸಮಾಧಾನವಾಗಲಿ ಅಂತ ಅಸಮಾಧಾನ ಹೊರಹಾಕಿದ್ರು.

ನನ್ನನ್ನ ನೇಮಕ ಮಾಡಿರೋದು ಸಿಎಂ, ರಾಜ್ಯಪಾಲರ ಅಡ್ವೈಸ್ ಮೇಲೆ ಮಾಡಿದ್ದಾರೆ. ಮುಖ್ಯಮಂತ್ರಿಗಳೇ ಇದಕ್ಕೆಲ್ಲ ಉತ್ತರ ಕೊಡ್ತಾರೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಡಿಸಿಎಂ ಹೇಳಿಕೆ ಯಾಕೆ ಅಂತ ನಮಗೆ ಗೊತ್ತಿಲ್ಲ. ಯಾಕೆ ಅಂತ ನೀವು ರಾಜಣ್ಣ ಅವರನ್ನ ಕೇಳಬೇಕು. ಇಲ್ಲವೇ ಸಿಎಂ ಅವರನ್ನ ಕೇಳಬೇಕು. ನಾವೆಲ್ಲ ಸಿಎಂ ಕೆಳಗಡೆ ಕೆಲಸ ಮಾಡ್ತಿದ್ದೇವೆ ಅವರೇ ಉತ್ತರ ಕೊಡ್ತಾರೆ ಎಂದರು. 

ಇನ್ನೂ ಸಿದ್ದರಾಮಯ್ಯ ಬಣದ ಆಪ್ತರಿಂದ ಡಿಕೆ ವಿರುದ್ಧ ಡಿಸಿಎಂ ಕಾರ್ಡ್ ಪ್ಲೇ ಮಾಡ್ತಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ರಾಜಕೀಯ ಜೀವನದಲ್ಲಿ ನಾನು ಯಾವತ್ತಿಗೂ ಬಣ ರಾಜಕೀಯ ಮಾಡಿಲ್ಲ. ನಾನು ಬಣ ರಾಜಕೀಯಕ್ಕೆ ಬೆಂಬಲ ಕೊಟ್ಟಿಲ್ಲ. ನನಗೆ ಬಣದ ಅವಶ್ಯಕತೆ ಇಲ್ಲ. ಬಣ ಮಾಡಬೇಕಿದ್ದರೆ ಎಸ್.ಎಂ ಕೃಷ್ಣ ಕಾಲದಲ್ಲಿ, ಬಂಗಾರಪ್ಪ ಕಾಲದಲ್ಲಿ ಮಾಡ್ತಿದ್ದೆ. ನನ್ನದು ಒಂದೇ ಒಂದು ಬಣ ಕಾಂಗ್ರೆಸ್ ಬಣ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments