Webdunia - Bharat's app for daily news and videos

Install App

ಚಲಿಸುತ್ತಿದ್ದ ರೈಲಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಹೋದ ಮೂವರು ಯುವಕರ ದುರ್ಮರಣ

Webdunia
ಮಂಗಳವಾರ, 3 ಅಕ್ಟೋಬರ್ 2017 (14:03 IST)
ಚಲಿಸುತ್ತಿರುವ ರೈಲಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಹೋದ ಮೂವರು ಯುವಕರು ರೈಲಿಗೆ ಸಿಲುಕಿ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ರಾಮನಗರದ ಬಿಡದಿ ಬಳಿಯ ವಂಡರ್ ಲಾ ಬಳಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ಯುವಕರು ರೈಲು ಬರುತ್ತಿದ್ದದ್ದನ್ನ ನೋಡಿ ಅದರ ಮುಂದೆ ಹೋಗಿ ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ್ದಾರೆ. ಈ ಸಂದರ್ಭ ವೇಗವಾಗಿ ಬರುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಬೆಂಗಳೂರಿನ ನ್ಯಾಶನಲ್ ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.

ಇಬ್ಬರನ್ನ ಪ್ರಭು, ಆನಂದ್ ಎಂದು ಗುರ್ತಿಸಲಾಗಿದ್ದು, ಮತ್ತೊಂದು ದೇಹ ಛಿದ್ರ ಛಿದ್ರವಾಗಿರುವುದರಿಂದ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments