Webdunia - Bharat's app for daily news and videos

Install App

ಜಲಮಂಡಳಿಗೆ ಜಪಾನ್ ಸಂಸ್ಥೆಯಿಂದ 32,391 ಕೋಟಿ ಸಾಲ ಮಂಜೂರು

Webdunia
ಶುಕ್ರವಾರ, 1 ಏಪ್ರಿಲ್ 2022 (20:05 IST)
ಬೆಂಗಳೂರು: ನಗರದಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೈಗೊಳ್ಳಲು ಜಪಾನ್ ಇಂಟರ್ ನ್ಯಾಷನಲ್ ಕಾರ್ಪೋರೇಷನ್ ಏಜೆನ್ಸಿ (ಜೈಕಾ) ಜಲಮಂಡಳಿಗೆ 32,391 ಕೋಟಿ ಸಾಲ ಮಂಜೂರು ಮಾಡಿದೆ ಎಂದು ಬಿ. ಡಬ್ಲ್ಯೂ. ಎಸ್.ಎಸ್.ಬಿ ಪತ್ರಿಕಾ ಪ್ರಕಣೆಯಲ್ಲಿ ಮಾಹಿತಿ ನೀಡಿದೆ.
 
ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಲ ಮಂಡಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ನಗರದ ಮೂರನೇ ಹಂತದ ಕುಡಿಯುವ ನೀರು ಯೋಜನೆಗೆ ಈ ಸಾಲ ನೀಡಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೂ ನೀರು ಪೂರೈಕೆಗೆ ಹಣ ವಿನಿಯೋಗಿಸಲು ಉದ್ದೇಶಿಸಲಾಗಿದೆ ನೀರು ಸರಬರಾಜು ಮಂಡಳಿ ಹೇಳಿದೆ.
 
ಈ ಯೋಜನೆ ಅಡಿ ಪಾಲಿಕೆ ವ್ಯಾಪ್ತಿಯಲ್ಲಿ ಸುರಕ್ಷಿತ ಮತ್ತು ಸುಸ್ಥಿರವಾದ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆ ಮತ್ತು ನೀರು ಶುದ್ದೀಕರಣ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ 110 ಗ್ರಾಮಗಳೂ ಸೇರಿದ್ದು, ಇದರಿಂದ ಸುಮಾರು 35 ಲಕ್ಷ ಜನರಿಗೆಅನುಕೂಲವಾಗಲಿದೆ ಎಂದು ತಿಳಿಸಿದೆ.
 
ಈ ಯೋಜನೆಯಿಂದಾಗಿ ನಗರದ ನಾಗರಿಕರ ಜೀವನ ಮಟ್ಟವನ್ನು ಸುಧಾರಣೆ ಮಾಡುವ ಜತೆಗೆ, ಬಿಬಿಎಂಪಿ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ವಾತಾವರಣವನ್ನು ಉತ್ತೇಜನ ದೊರೆತಂತಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
 
ಜಲಮಂಡಳಿಗೆ ಬಿಗ್ ರಿಲೀಫ್:
 
 ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ಹೊಸ ಕಾಮಗಾರಿಗಳಿಗೆ ಹಣದ ಕೊರತೆ ಎದುರಿಸುತ್ತಿರುವ ಜಲಮಂಡಳಿಗೆ ಸಾಲ ಮಂಜೂರಾಗಿರುವುದು ಬಿಗ್ ರಿಲೀಫ್ ನೀಡಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ