Webdunia - Bharat's app for daily news and videos

Install App

320 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗ್ತಿದೆ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ

Webdunia
ಸೋಮವಾರ, 3 ಜನವರಿ 2022 (21:05 IST)
ಬೆಂಗಳೂರು:- ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನೂರು ಎಕರೆ ವಿಸ್ತಾರದಲ್ಲಿ ತಲೆ ಎತ್ತಲಿದೆ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ.
 
ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯ ಜೊತೆಗೆ ಆಧುನಿಕ ಶಿಕ್ಷಣ ಪಡೆಯುವಂತಹ ಕೇಂದ್ರಗಳನ್ನು ಇದೇ ವಿವಿಯ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದೆ.
 
ಹತ್ತು ವರ್ಷಗಳ ಹಿಂದೆ ಸಂಸ್ಕೃತ ವಿವಿಗೆ ಇಲ್ಲಿ 100 ಎಕರೆ ಜಾಗ ಮಂಜೂರಾಗಿದ್ದರೂ ತಾಂತ್ರಿಕ ಕಾರಣಗಳಿಂದ ಜಾಗ ಹಸ್ತಾಂತರ ವಿಳಂಬವಾಗಿತ್ತು. ಇದೀಗ ಇಲ್ಲಿ 320 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣವಾಗಲಿದೆ. ತರ್ಕ, ವಿಮರ್ಶೆ, ಅರ್ಥಶಾಸ್ತ್ರ, ಕಂಪ್ಯೂಟರ್, ಯೋಗ, ಆಯುರ್ವೇದ ವೈದ್ಯ ತರಬೇತಿ, ದೇಶಿ ಗಿಡಮೂಲಿಕೆಗಳ ವನ ಹಾಗೂ ವೇದಗಣಿತ, ಶಿಕ್ಷಕ ತರಬೇತಿ ಕೇಂದ್ರಗಳು, ಬೃಹತ್ ಗ್ರಂಥಾಲಯ ನಿರ್ಮಾಣವೂ ಸೇರಿದಂತೆ ಅನೇಕ ಯೋಜನೆಗಳು ಬರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments