Webdunia - Bharat's app for daily news and videos

Install App

35 ಕೋಟಿ ತಗೊಂಡಿದ್ದರೆ ತನಿಖೆ ಆಗಲಿ: ಕೋಡಿಹಳ್ಳಿ ಚಂದ್ರಶೇಖರ್

Webdunia
ಶನಿವಾರ, 28 ಮೇ 2022 (19:50 IST)
ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ನಾನು 35 ಕೋಟಿ ರೂ. ಲಂಚ ಪಡೆದಿದ್ದೇನೆ ಎಂದು ಮಾಧ್ಯಮವೊಂದು ಬಿಂಬಿಸುವ ಪ್ರಯತ್ನ ಮಾಡಿದೆ. ಆದರೆ ನಾನು ಹಣವನ್ನೇ ಪಡೆಯದೇ ಹೇಗೆ ಭ್ರಷ್ಟ ಆಗುತ್ತೇನೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸುದ್ದಿ ಸಂಸ್ಥೆ ನನ್ನ ಜೊತೆಗೆ 8 ತಿಂಗಳ ಕಾಲ ಇದ್ದು, ಈ ವೀಡಿಯೋ ಮಾಡಿದೆ. ಆದರೆ ಅವರೇ ಹೇಳುವಂತೆ ಮಾತನಾಡಿದ್ದೇವೆ. ಆದರೆ ಯಾವುದೇ ಹಣ ಪಡೆದಿಲ್ಲ ಎಂದು ಹೇಳಿದರು.
ಪ್ರತಿಭಟನೆ ನಿಲ್ಲಿಸಲು ನಾನು ಸಾರಿಗೆ ಸಂಸ್ಥೆಯ ಯಾವುದೇ ಅಧಿಕಾರಿ ಅಥವಾ ಸಚಿವರನ್ನು ಖಾಸಗಿಯಾಗಿ ಭೇಟಿಯಾಗಿಲ್ಲ. ಅವರ ಬಳಿ ಹಣದ ಬೇಡಿಕೆ ಇಟ್ಟಿಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲು ಒಂದೂವರೆ ವರ್ಷದ ಹಿಂದೆ 8 ತಿಂಗಳು ನನ್ನ ಜೊತೆಗಿದ್ದು ಮಾಡಿದ ವೀಡಿಯೋವನ್ನು ಈಗ ಬಿಡುಗಡೆ ಮಾಡಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆರೋಪಿಸಿದರು.
ನಾನು ಹಣ ಪಡೆದಿದ್ದೇನ ಎಂಬ ಆರೋಪ ಕುರಿತು ಮುಖ್ಯಮಂತ್ರಿಗಳು ಕೂಡಲೇ ತನಿಖೆ ನಡೆಸಬೇಕು. ನನ್ನ ಎಲ್ಲಾ ಬ್ಯಾಂಕ್‌ ಖಾತೆಗಳನ್ನು ಜಫ್ತಿ ಮಾಡಲಿ ಬೇಕಾದರೆ ೮ ತಿಂಗಳ ಕಾಲ ಮಾತನಾಡಿದ ವೀಡಿಯೋವನ್ನು ತಮಗೆ ಬೇಕಾದಂತೆ ಎಡಿಟ್‌ ಮಾಡಿ ಪ್ರಸಾರ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments