ನಂದಿನಿ ಮುಗಿಸಲು 3ನೇ ಸಂಚು - HDK

Webdunia
ಶನಿವಾರ, 8 ಏಪ್ರಿಲ್ 2023 (18:20 IST)
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ H.D. ಕುಮಾರಸ್ವಾಮಿ ಸರಣಿ ಟ್ವೀಟ್​​ ಮೂಲಕ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮುಲ್ ಜತೆ ನಂದಿನಿ ವಿಲೀನ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಮೊದಲನೇ ಸಂಚು, ಮೊಸರಿನ ಪ್ಯಾಕೆಟ್ ಮೇಲೆ ಹಿಂದಿಯ ದಹಿ ಪದ ಮುದ್ರಣ ಎರಡನೇ ಸಂಚು. ಆದರೆ, ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಯಿತು. ಇದೀಗ 3ನೇ ಸಂಚು ಸಫಲಗೊಳಿಸಲು ಅಮುಲ್​​​ ಮೂಲಕ ಕೇಂದ್ರ ಸರ್ಕಾರ ಹೊರಟಿದೆ. ಹಿಂಬಾಗಿಲ ಮೂಲಕ ಒಳ ನುಗ್ಗುತ್ತಿದೆ.. ತನ್ನ ಏಕೈಕ ಪ್ರತಿ ಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​​ಗೆ ಒತ್ತಾಸೆಯಾಗಿ ನಿಂತು KMF ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ. ಆಪೋಶನ ತೆಗೆದುಕೊಳ್ಳುವುದು ಖಚಿತ ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್​ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ ಎಂದು HDK ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದ ಮೊಸಳೆಕಣ್ಣೀರು ಅಲ್ಪಸಂಖ್ಯಾತರಿಗೂ ಅರಿವಾಗಿದೆ: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಏನೇ ಹೇಳಿದ್ರೂ ಬಗ್ಗದ ಇರಾನ್ ಗೆ ಡೊನಾಲ್ಡ್ ಟ್ರಂಪ್ ನೀಡಿದ ಫೈನಲ್ ವಾರ್ನಿಂಗ್ ಏನು ಗೊತ್ತಾ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಬ್ಬಾ ಖುಷಿಯೇ.. ಸೇನಾ ನಾಯಿಯೊಂದಕ್ಕೆ 30 ಸೆಕೆಂಡ್ ಫ್ರೀ ಟೈಂ ಸಿಕ್ಕಾಗ ಏನು ಮಾಡಿತು ನೋಡಿ Video

ಮುಂದಿನ ಸುದ್ದಿ
Show comments