Select Your Language

Notifications

webdunia
webdunia
webdunia
webdunia

ಚಿರತೆ ದಾಳಿಗೆ 3ನೇ ಬಲಿ! ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ಚಿರತೆ ದಾಳಿಗೆ 3ನೇ ಬಲಿ! ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ
ಮೈಸೂರು , ಶನಿವಾರ, 21 ಜನವರಿ 2023 (12:13 IST)
ಮೈಸೂರು : ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದ್ದು, ಚಿರತೆ ದಾಳಿಗೆ ಮೂರನೇ ಬಲಿಯಾಗಿದೆ. ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಭೀತಿ ಮತ್ತಷ್ಟು ಹೆಚ್ಚಿದೆ.

ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಸಿದ್ದಮ್ಮ (60) ಎಂಬ ಮಹಿಳೆಯನ್ನು ಚಿರತೆ ಬಲಿ ಪಡೆದಿದೆ. ಮನೆಯಾಚೆಯಿದ್ದ ಸೌದೆ ಎತ್ತಿಕೊಳ್ಳಲು ಬಂದಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ಮಾಡಿದೆ. ನಂತರ ಸಿದ್ದಮ್ಮರನ್ನು ಎಳೆದೊಯ್ದಿದೆ. ಈ ವೇಳೆ ಗ್ರಾಮಸ್ಥರು ಕಿರುಚಾಡಿದ ಬೆನ್ನಲ್ಲೇ ಸ್ಥಳದಲ್ಲೇ ಮಹಿಳೆಯ ದೇಹ ಬಿಟ್ಟು ಪರಾರಿಯಾಗಿದೆ.

ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದು ಗಂಟೆಗಳು ಕಳೆದರೂ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಂಪಿ ಉತ್ಸವ : ಲೋಗೋ, ಪೋಸ್ಟರ್ ಬಿಡುಗಡೆ