ಗುಡ್ಡ ಕುಸಿತದಿಂದ ನಾಲ್ವರ ಜೀವಂತಸಾವು...!

Webdunia
ಮಂಗಳವಾರ, 2 ಆಗಸ್ಟ್ 2022 (17:52 IST)
ಭಟ್ಕಳ
ಭಟ್ಕಳ ತಾಲೂಕಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದ್ದು, ತಾಲೂಕಿನ ಬಹುತೇಕ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ. ಮೂಢ ಭಟ್ಕಳ ಬೈಪಾಸ್​ನಿಂದ ಮುಟ್ಟಳ್ಳಿಗೆ ಸಂಪರ್ಕಿಸುವ ರಸ್ತೆಯೂ ಸಂಪೂರ್ಣ ಜಲಾವೃತಗೊಂಡಿದೆ. ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಮೂಢ ಭಟ್ಕಳ ಬೈಪಾಸ್​ ಸೇರಿದಂತೆ ಅನೇಕ ಗ್ರಾಮಗಳು ಮಳೆಗೆ ಮುಳುಗಡೆಯಾಗಿದೆ. ಜಲಾವೃತಗೊಂಡಿರುವ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ. ಮಣ್ಕುಳಿಯಿಂದ ಮೂಢ ಭಟ್ಕಳ ಬೈಪಾಸಿನ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಎನ್​​​​ಡಿಆರ್​ಎಫ್ ತಂಡ ಆಗಮಿಸಿದ್ದು ರಕ್ಷಣಾಕಾರ್ಯ ಮುಂದುವರೆದಿದೆ. ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಿಪಾಲ್ ನಾರಾಯಣ ಎಂಬ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದ್ದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕ, ಇಸ್ರೇಲ್ ಮೊಣಕಾಲೂರಿ ಸೋಲು ಒಪ್ಪಿಕೊಳ್ಳುವವರೆಗೂ ಶಾಂತಿ ಇಲ್ಲ: ಮೊಜ್ತಬಾ ಖಮೇನಿ

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ತಂಪೆರೆದ ವರುಣ, ಆರ್‌ಟಿ ನಗರದಲ್ಲಿ ಆಳಿಕಲ್ಲು ಮಳೆ

ಪುನೀತ್ ಬದುಕಿನ ಹಾದಿ ಚಿಕ್ಕದಾದರೂ, ಸದಾ ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ

ಪ.ಬಂಗಾಳ: ಬಿಜೆಪಿ ಬೆನ್ನಲ್ಲೇ 291 ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ

ಸರ್ವೋಚ್ಛ ನಾಯಕನ ಸಾವಿನಿಂದ ಸುಧಾರಿಸುತ್ತಿರುವಾಗಲೇ ಭದ್ರಾತಾ ಮುಖ್ಯಸ್ಥನನ್ನೇ ಕಳೆದುಕೊಂಡಿತೇ ಇರಾನ್‌

ಮುಂದಿನ ಸುದ್ದಿ
Show comments