Select Your Language

Notifications

webdunia
webdunia
webdunia
webdunia

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರು , ಶನಿವಾರ, 31 ಜನವರಿ 2015 (11:19 IST)
ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ನಗರದ ಹೊಸಮನೆ ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. 30 ವರ್ಷದ ಉಮೇಶ್ 25 ವರ್ಷದ ಜಯಲಕ್ಷ್ಮಿ ಮತ್ತು 4 ವರ್ಷದ ಹೇಮಾ ಮತ್ತು 1 ವರ್ಷದ ಶಿವು ಆತ್ಮಹತ್ಯೆಗೆ ಶರಣಾದವರು.

 ಪತ್ನಿ ಮತ್ತು ಮಕ್ಕಳು ವಿಷ ಸೇವಿಸಿ ದುರಂತದ ಸಾವನ್ಪಪ್ಪಿದ್ದಾರೆಂದು ತಿಳಿದುಬಂದಿದೆ. ಪತಿಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿದ ಬಳಿಕ ಪತಿ ನೇಣಿನ ಕುಣಿಕೆಗೆ ತಲೆಯೊಡ್ಡಿ ಮೃತಪಟ್ಟಿದ್ದಾರೆಂದು ಭಾವಿಸಲಾಗಿದೆ.

ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆತ್ಮಹತ್ಯೆಗೆ ಕಾರಣವನ್ನು ತನಿಖೆ ನಡೆಸಿದ್ದಾರೆ. 

Share this Story:

Follow Webdunia kannada