Webdunia - Bharat's app for daily news and videos

Install App

ವಿದ್ಯಾರ್ಥಿನಿಯನ್ನು ಅಪಹರಿಸಿದ ನಾಲ್ವರ ಬಂಧನ

Webdunia
ಶನಿವಾರ, 26 ಜುಲೈ 2014 (10:28 IST)
ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 24ರಂದು ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಲ್ವರು ಆರೋಪಿಗಳು ಅಪಹರಿಸಿ ಕರೆದುಕೊಂಡು ಹೋಗಿದ್ದರು.  ಯುವತಿ ಒಂಟಿಯಾಗಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಯುವಕರು ಅಪಹರಿಸಿದ್ದರು.

ಯುವತಿಯನ್ನು ಅಪಹರಿಸಲು ಮುಖ್ಯ ಕಾರಣ ಮಧು  ಎಂಬವ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯನ್ನು ಅಪಹರಿಸಿ ಮದುವೆ ಒತ್ತಡ ಹಾಕಬೇಕೆಂಬ ಉದ್ದೇಶದಿಂದ ಈ ದುಷ್ಕೃತ್ಯಕ್ಕೆ ಕೈಹಾಕಿದ್ದ. ಕಾರಿನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವ ವಿಷಯವನ್ನು ತಿಳಿಸಿ, ನನ್ನನ್ನೇ ಮದುವೆಯಾಗಬೇಕೆಂದು ಒತ್ತಾಯಿಸಿದ.

ಆಗ ಯುವತಿ ರಮ್ಯಾ  ಸ್ವಲ್ಪ ಜಾಣ್ಮೆ ಉಪಯೋಗಿಸಿ ಮನೆಯವರಿಗೆ ಹೇಳಿ ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿದಳು. ಆಗ ಮಧು ಯುವತಿಯನ್ನು ಬಿಡುಗಡೆ ಮಾಡಿದ ಬಳಿಕ ಯುವತಿ ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದರಿಂದ ಮನೆಯವರು ಪೊಲೀಸರಿಗೆ ದೂರು ನೀಡಿದರು. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments