Webdunia - Bharat's app for daily news and videos

Install App

ಬಿಎಂಟಿಸಿ ಬಸ್ ಹರಿದು 4ರ ಬಾಲಕಿ ಸಾವು

Webdunia
ಗುರುವಾರ, 17 ಆಗಸ್ಟ್ 2023 (10:12 IST)
ಬೆಂಗಳೂರು : ಶಾಲೆಗೆ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯ ಬಳಿ ನಡೆದಿದೆ.
 
ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ಘಟನೆ ನಡೆದಿದ್ದು, ನಾಲ್ಕೂವರೆ ವರ್ಷದ ಪೂರ್ವಿ ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಂದೆ ಪ್ರಸನ್ನ ಮಗಳು ಪೂರ್ವಿಯನ್ನು ಶಾಲೆಗೆ ಬಿಡಲು ಬೈಕ್ನಲ್ಲಿ ಕರೆದೊಯ್ಯುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ತಂದೆ ಪ್ರಸನ್ನ ಬೈಕ್ನ ಎಡಬದಿಗೆ ಬಿದ್ದಿದ್ದಾರೆ. ಪೂರ್ವಿ ಬಲಬದಿಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ ಬಿಎಂಟಿಸಿ ಬಸ್ ಹರಿದು ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಪೂರ್ವಿ ಖಾಸಗಿ ಶಾಲೆಯೊಂದರಲ್ಲಿ ಪ್ರೀ ಕೆಜಿ ಓದುತ್ತಿದ್ದು, ತಂದೆ ಪ್ರಸನ್ನ ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗ ಹೊಂದಿದ್ದಾರೆ. ಪ್ರಸನ್ನ ಪ್ರತಿನಿತ್ಯ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಕೆಲಸಕ್ಕೆ ತೆರಳುತ್ತಿದ್ದರು. ಇಂದು ಸಹಾ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ವೇಳೆ ಅಪಘಾತವಾಗಿ ದುರ್ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments