Webdunia - Bharat's app for daily news and videos

Install App

40% ಪರ್ಸೆಂಟ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನೆ

Webdunia
ಬುಧವಾರ, 18 ಜನವರಿ 2023 (14:13 IST)
ಇಂದು ರಾಜ್ಯ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆಯನ್ನ ನಡೆಸಲಾಗಿದೆ.ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗುತ್ತಿಗೆದಾರರಿಂದ ಪ್ರತಿಭಟನೆ ನಡೆಯುತ್ತಿದೆ.ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಭಾಗಿಯಾಗಿದ್ದು,
 
ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ನೇತೃತ್ವದಲ್ಲಿ ಸಾಂಕೇತಿಕವಾಗಿ ಒಂದು ದಿನ ಕಾಮಗಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದ್ದು,ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ಬಿಲ್ ಬಾಕಿ ಹಿನ್ನೆಲೆ ಕಳೆದ ಬಾರಿ ಸರ್ಕಾರ ನೀಡಿದ್ದ ಭರವಸೆ ಇನ್ನೂ ಭರವಸೆಯಾಗಿ ಉಳಿದಿದೆ.ಬಿಲ್ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆಸಿಕೊಂಡಿಲ್ಲ.ಬಾಕಿ ಮೊತ್ತದಲ್ಲಿ ಒಂದು ರೂಪಾಯಿ ಕೂಡ ಪಾವತಿಯಾಗಿಲ್ಲ.ಭ್ರಷ್ಟಾಚಾರ ಆರೋಪ ಮಾಡಿದ ಅಧ್ಯಕ್ಷರನ್ನು ಜೈಲು ಪಾಲು ಮಾಡಿದ್ದ ಸರ್ಕಾರ.ಭ್ರಷ್ಟಾಚಾರ ಆರೋಪ ಮಾಡಿದ್ರೆ ಬಿಜೆಪಿಯವರು ಜೈಲಿಗೆ ಕಳಿಸ್ತಾರೆ.ನ್ಯಾಯ ಕೇಳಿದ್ರೆ ಬಿಲ್ ಪಾವತಿ ತಡ ಮಾಡ್ತಾರೆ.ಇಲ್ಲ ಸಲ್ಲದ ತಾಂತ್ರಿಕ ಕಾರಣಗಳನ್ನು ಹೇಳಿ ಪಾವತಿ ದಿನಾಂಕ ಮುಂದೂಡುತ್ತಲೇ ಇದ್ದಾರೆ.ಈ ಹಿನ್ನೆಲ್ ಸಿಡಿದೆದ್ದ ಗುತ್ತಿಗೆದಾರರ ಸಂಘ ಸರ್ಕಾರ ಕ್ಕೆ ಡೆಡ್ ಲೈನ್ ನೀಡಿದೆ.ಈ ತಿಂಗಳ ಅಂತ್ಯದೋಳಗೆ ಬಾಕಿ ಬಿಲ್ ಪಾವತಿ ಮಾಡಬೇಕು.ಇಲ್ಲವಾದ್ರೆ.. ರಾಜ್ಯದಲ್ಲಿ ನಡೆಯುತ್ತಿರೋ ಎಲ್ಲಾ ಕಾಮಗಾರಿಗಳನ್ನು ಬಂದ್ ಮಾಡ್ತೀವಿ.ಕೂಡಲೇ ಬಾಕಿ ಬಿಲ್ ಪಾವತಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

ಮುಂದಿನ ಸುದ್ದಿ
Show comments