ವರುಣನ ಆರ್ಭಟಕ್ಕೆ 40 ಗ್ರಾಮ ಸಂಪರ್ಕ ಕಡಿತ

Webdunia
ಗುರುವಾರ, 20 ಜುಲೈ 2023 (12:31 IST)
ಬೆಳಗಾವಿ : ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದ ಹಾಲತ್ರಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
 
ಖಾನಾಪುರ ತಾಲೂಕಿನ ಅಶೋಕ ನಗರದ ಬಳಿ ಪ್ರವಾಹ ಭೀತಿ ಎದುರಾಗಿದ್ದು ಸೇತುವೆ ಮುಳುಗುವ ಆತಂಕ ಎದುರಾಗಿದೆ. ಸೇತುವೆ ಮುಳುಗಿದರೆ 40 ಹಳ್ಳಿಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ.

ಸೇತುವೆ ಮುಳುಗಿದರೆ ಹೆಮ್ಮಡಗಾ, ಅಶೋಕ ನಗರ, ಗವಾಳಿ, ಪಾಸ್ತೊಳಿ ಸೇರಿದಂತೆ 40 ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಸೇತುವೆ ಮುಳುಗಡೆಗೆ ಕೇವಲ ಅರ್ಧ ಅಡಿಯಷ್ಟೇ ನೀರು ಬಾಕಿ ಇದೆ. ಸೇತುವೆಯ ಎತ್ತರ ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆ ಏಳು ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿ ಸೇರಿ ಏಳು ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಮೇಲೆ ನಿಗಾ ಇಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ 83 ಸಂಪರ್ಕ ಸೇತುವೆಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ಇಟ್ಟಿದ್ದಾರೆ. ನಗರಕ್ಕೆ, ಗ್ರಾಮಗಳಿಗೆ ಸಂಪರ್ಕಿಸುವ ಸೇತುವೆ ಮುಳುಗುವ ಭೀತಿ ಹಿನ್ನೆಲೆ ಆಯಾ ಠಾಣಾ ಪೊಲೀಸರು ನದಿ, ಹಳ್ಳಕ್ಕೆ ಕಟ್ಟಿರುವ ಸೇತುವೆ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ತಿಳಿಸಿದ್ದು ನದಿಗಳ ಮೇಲೆ ಎಚ್ಚರಿಕೆಯಿಂದ ಓಡಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments